ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಈ ಕುರಿತು ಪ್ರಕಟಿಸಿದ್ದಾರೆ. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಪ್ರಸನ್ನ ಅವರು 2017ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಎಸ್ಐ ಆಗಿ ಅಧಿಕಾರ ವಹಿಸಿದ್ದರು. ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅಲ್ಲಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. 2022ರ ಜನವರಿಯಲ್ಲಿ ಕಾರ್ಕಳ ಎಸ್ಐ ಆಗಿ ವರ್ಗಾವಣೆ ಹೊಂದಿದ ಪ್ರಸನ್ನ ಅವರು ತನ್ನ ಕರ್ತವ್ಯಪರತೆ, ದಕ್ಷತೆಯಿಂದಲೇ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.
ನೆಟ್ಟಾರು ಪ್ರಕರಣ ಸೇರಿದಂತೆ ಹಲವು ಕೊಲೆ, ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಸನ್ನ ಅವರು ಎನ್ಐಎ ತಂಡದಲ್ಲೂ ಸಕ್ರಿಯವಾಗಿದ್ದರು. ಕಾರ್ಕಳದಲ್ಲಿ ನಡೆದ ಕಾರ್ಕಳ ಉತ್ಸವ, ಪರಶುರಾಮ ಥೀಮ್ ಪಾರ್ಕ್ ಕಾರ್ಯಕ್ರಮ ಸಂದರ್ಭ ಸುವ್ಯವಸ್ಥೆ ಮತ್ತು ಸಂಚಾರಿ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…