Featured

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ – Vishwanews24

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ

ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌ ಈ ಕುರಿತು ಪ್ರಕಟಿಸಿದ್ದಾರೆ. 2015ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡ ಪ್ರಸನ್ನ ಅವರು 2017ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಎಸ್‌ಐ ಆಗಿ ಅಧಿಕಾರ ವಹಿಸಿದ್ದರು. ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅಲ್ಲಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. 2022ರ ಜನವರಿಯಲ್ಲಿ ಕಾರ್ಕಳ ಎಸ್‌ಐ ಆಗಿ ವರ್ಗಾವಣೆ ಹೊಂದಿದ ಪ್ರಸನ್ನ ಅವರು ತನ್ನ ಕರ್ತವ್ಯಪರತೆ, ದಕ್ಷತೆಯಿಂದಲೇ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.

ನೆಟ್ಟಾರು ಪ್ರಕರಣ ಸೇರಿದಂತೆ ಹಲವು ಕೊಲೆ, ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಸನ್ನ ಅವರು ಎನ್‌ಐಎ ತಂಡದಲ್ಲೂ ಸಕ್ರಿಯವಾಗಿದ್ದರು. ಕಾರ್ಕಳದಲ್ಲಿ ನಡೆದ ಕಾರ್ಕಳ ಉತ್ಸವ, ಪರಶುರಾಮ ಥೀಮ್‌ ಪಾರ್ಕ್‌ ಕಾರ್ಯಕ್ರಮ ಸಂದರ್ಭ ಸುವ್ಯವಸ್ಥೆ ಮತ್ತು ಸಂಚಾರಿ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

57 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago