ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಈ ಕುರಿತು ಪ್ರಕಟಿಸಿದ್ದಾರೆ. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಪ್ರಸನ್ನ ಅವರು 2017ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಎಸ್ಐ ಆಗಿ ಅಧಿಕಾರ ವಹಿಸಿದ್ದರು. ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದ್ದ ಅಲ್ಲಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. 2022ರ ಜನವರಿಯಲ್ಲಿ ಕಾರ್ಕಳ ಎಸ್ಐ ಆಗಿ ವರ್ಗಾವಣೆ ಹೊಂದಿದ ಪ್ರಸನ್ನ ಅವರು ತನ್ನ ಕರ್ತವ್ಯಪರತೆ, ದಕ್ಷತೆಯಿಂದಲೇ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು.
ನೆಟ್ಟಾರು ಪ್ರಕರಣ ಸೇರಿದಂತೆ ಹಲವು ಕೊಲೆ, ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಸನ್ನ ಅವರು ಎನ್ಐಎ ತಂಡದಲ್ಲೂ ಸಕ್ರಿಯವಾಗಿದ್ದರು. ಕಾರ್ಕಳದಲ್ಲಿ ನಡೆದ ಕಾರ್ಕಳ ಉತ್ಸವ, ಪರಶುರಾಮ ಥೀಮ್ ಪಾರ್ಕ್ ಕಾರ್ಯಕ್ರಮ ಸಂದರ್ಭ ಸುವ್ಯವಸ್ಥೆ ಮತ್ತು ಸಂಚಾರಿ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…