ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದರೆ, ನ.23ರಂದು ನಡೆದ ಮತದಾನದಲ್ಲಿ ರಾಜೇಂದ್ರ ಶೆಟ್ಟಿ ಹಾಗೂ ಮಹೇಶ್ ಗೆಲುವು ಸಾಧಿಸಿದ್ದಾರೆ.ನೀರೆ ಗ್ರಾ.ಪಂ. (3 ಸ್ಥಾನ) ನೀರೆ – 1 (ಅ.ಪಂ. ಮಹಿಳಾ ಮೀಸಲಾತಿ) ರಲ್ಲಿ 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು.
ನೀರೆ – 2 (ಹಿಂದುಳಿದ ಅ ವರ್ಗ/ಸಾಮಾನ್ಯ 2 ಸ್ಥಾನವಿದ್ದು, ಕಾಂಗ್ರೆಸ್ನಿಂದ ಪ್ರಸನ್ನ ಆಚಾರ್ಯ ಸ್ಪರ್ಧಿಸಿದ್ದರೆ, ಮಹೇಶ್ ಹಾಗೂ ರಾಜೇಂದ್ರ ಶೆಟ್ಟಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಇವರಲ್ಲಿ ರಾಜೇಂದ್ರ ಶೆಟ್ಟಿ 422, ಮಹೇಶ್ 405 ಹಾಗೂ ಪ್ರಸನ್ನ ಆಚಾರ್ಯ 151 ಮತಗಳನ್ನು ಪಡೆದಿದ್ದು, ರಾಜೇಂದ್ರ ಮತು ಮಹೇಶ್ ಗೆಲುವು ಸಾಧಿಸಿದ್ದಾರೆ.
ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದೆ. ನೀರೆ -2 ಗ್ರಾ. ಪಂ. ನಲ್ಲಿ 375 ಪುರುಷರು, 442 ಮಹಿಳೆಯರು ಸೇರಿದಂತೆ ಒಟ್ಟು 817 ಮತದಾರರಿದ್ದು, 63.6475ಶೇ. ಮತದಾನವಾಗಿತ್ತು. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…