Featured

ಕಾರ್ಕಳ: ಪರಶುರಾಮನ ಪ್ರತಿಮೆ ; ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಶಾಸಕರ ನಿಜ ಬಣ್ಣ ಪೋಲೀಸ್ ತನಿಖೆಯಿಂದ ಬಯಲು : ಶುಭದರಾವ್‌ – vishwanews24

ಕಾರ್ಕಳ:ಶಾಸಕರ  ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಸಿದ್ಧತೆ :ಶುಭದರಾವ್‌

ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ವಿಚಾರವಾಗಿ ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಶಾಸಕರ ನಿಜ ಬಣ್ಣ ಪೋಲೀಸ್ ತನಿಖೆಯಿಂದ ಬಯಲಾಗಿದೆ, ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದು ಅಲ್ಲ ಎಂಬುದು ಪೋಲೀಸರು ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಬಿಡಿ ಭಾಗಗಳಿಂದ ಬಹಿರಂಗವಾಗಿದೆಂದು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್‌ ತಿಳಿಸಿದ್ದಾರೆ.

ಬೆಟ್ಟದ ಮೇಲೆ ಎರಡು ಕಾಲುಗಳ ಮೇಲೆ ಅರ್ಧ ಭಾಗ ನಿಂತಿರುವಾಗ ವಶಪಡಿಸಿಕೊಂಡಿರುವ ಬಿಡಿ ಭಾಗಗಳಲ್ಲೂ ಎರಡು ಕಾಲು ಇದ್ದು ಪ್ರತಿಮೆಗೆ ನಾಲ್ಕು ಕಾಲು ಇರಲು ಹೇಗೆ ಸಾದ್ಯ ಎಂಬ ಪ್ರಶ್ನೆ ಮೂಡಿದೆ.
ಈ ಎಲ್ಲಾ ವಿಚಾರವಾಗಿ ಮೊದಲಿನಿಂದಲೂ ಜನತೆಗೆ ನಿರಂತರ ಸುಳ್ಳು ಹೇಳುತ್ತಾ ಬಂದಿರುವ ಶಾಸಕರು ಮಾಡಿರುವುದು ಧರ್ಮ ದ್ರೋಹದ ಕೆಲಸವಾಗಿದೆ ಅವರು ಇನ್ನಾದರೂ ತನ್ನೊಪ್ಪಿಕೊಂಡು ಕ್ಷಮೆಯಾಚಿಸ ಬೇಕೆಂದು ಮತ್ತು ಅವರ ತಕ್ಷಣ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಸಿದ್ಧತೆ ನಡೆಸಲಾಗುವುದು ಶುಭದರಾವ್ ಹೇಳಿದ್ದಾರೆ.

ಪ್ರತಿಮೆ ನಕಲಿ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ, ಪ್ರತಿಮೆ ಪೂರ್ಣಗೊಂಡ ಬಗ್ಗೆಯಾಗಲಿ, ಅಲ್ಲಿಂದ ಇಲ್ಲಿಗೆ ತಂದಿರುವ ಬಗ್ಗೆಯಾಗಲಿ ಯಾವುದೇ ದಾಖಲೆಗಳು ಯಾರ ಬಳಿಯೂ ಇಲ್ಲ, ಚುನಾವಣೆಯ ದೃಷ್ಟಿಯಿಂದ ತುರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಪ್ರತಿಮೆ ನಿರ್ಮಾಣವಾಗದ ಕಾರಣ ಪೈಬರ್ ಪ್ರತಿಮೆಯನ್ನು ತಂದು ಉದ್ಘಾಟಿಸಲಾಗಿದೆ, ಅದರ ನಿಜ ಬಣ್ಣ ಬಯಲಾದಾಗ ರಾತ್ರಿಯಲ್ಲಿ ಅದನ್ನು ಕೊಂಡೊಯ್ದು ಪ್ರತಿಮೆಯ ರೂಪ ಬದಲಾವಣೆ ಇದೆ ಎಂದು ನಂಬಿಸಲಾಗಿದೆ. ಈಗ ವಶಪಡಿಸಿಕೊಂಡಿರುವ ಭಾಗಗಳು ಉದ್ಘಾಟನೆಯ ನಂತರ ತಯಾರಾದ ಭಾಗಗಳು ಎಂದು ಅಲ್ಲಿ ಸಿಕ್ಕಿರುವ ನಾಲ್ಕು ಕಾಲುಗಳಿಂದ ಸಾಬೀತಾಗಿದೆ, ಒಂದು ವೇಳೆ ಈಗ ಬೆಟ್ಟದ ಮೇಲಿರುವ ಪ್ರತಿಮೆ ಕಂಚಿದ್ದೇ ಆಗಿದ್ದರೆ ಮತ್ತೊಮ್ಮೆ ಕಾಲುಗಳನ್ನು ತಯಾರಿಸುವ ಅಗತ್ಯವಿತ್ತೇ ಎಂದು ಪ್ರಶ್ನಿಸಿ ಪ್ರತಿಮೆಯ ಮುಖದ ಭಾಗ ಸಂಪೂರ್ಣ ಬದಲಾಗಿದ್ದು ಅಂದಿನ ಮುಖಕ್ಕೆ ಹೋಲಿಕೆಯೇ ಇಲ್ಲ ಇದು ನಕಲಿ ಪ್ರತಿಮೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದಿದ್ದಾರೆ.

ಪ್ರತಿಮೆ ನಿರ್ಮಾತ ಕೃಷ್ಣನಾಯ್ಡ್ ಮಹಾನ್ ಸುಳ್ಳುಗಾರ ಇಲ್ಲವಾದರೆ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಅಗತ್ಯವೇನಿದೆ, ಈಗ ಜಾತಿ ಮತ್ತು ಧರ್ಮವನ್ನು ಎಳೆದು ತಂದು ಕೋಮು ಗಲಭೆಯ ಹುನ್ನಾರ ನಡೆಸುತ್ತಿದ್ದಾರೆ ಅವರ ವಿರುದ್ಧ ದೂರು ದಾಖಲಿಸಲಾಗುವುದು.

ಸತ್ಯವನ್ನು ಎಷ್ಟೇ ಮುಚ್ಚಿಟ್ಟರೂ ಅದು ಬಹಿರಂಗವಾಗಲೇ ಬೇಕು, ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನಪಟ್ಟಾಗ ಕಾಂಗ್ರೇಸ್ ಕಾರ್ಯಕರ್ತರ ಮೇಲೆ ಪೋಲೀಸ್ ಕೇಸು ದಾಖಲಿಸಿ ಬೆದರಿಸಲಾಯಿತು, ಅನ್ಯಾಯದ ವಿರುದ್ಧ ಮಾತನಾಡಿದವರನ್ನು ಅವಮಾನಿಸಲಾಯಿತು, ಅದರೆ ಸತ್ಯಕ್ಕೆ ಗೆಲುವಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

5 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

5 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

6 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

7 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

7 hours ago