Featured

ಕಾರ್ಕಳ: ಪರಶುರಾಮನ ಪ್ರತಿಮೆ ; ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಶಾಸಕರ ನಿಜ ಬಣ್ಣ ಪೋಲೀಸ್ ತನಿಖೆಯಿಂದ ಬಯಲು : ಶುಭದರಾವ್‌ – vishwanews24

ಕಾರ್ಕಳ:ಶಾಸಕರ  ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಸಿದ್ಧತೆ :ಶುಭದರಾವ್‌

ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ವಿಚಾರವಾಗಿ ಜನತೆಗೆ ನಿರಂತರ ಸುಳ್ಳು ಹೇಳುತ್ತಿದ್ದ ಶಾಸಕರ ನಿಜ ಬಣ್ಣ ಪೋಲೀಸ್ ತನಿಖೆಯಿಂದ ಬಯಲಾಗಿದೆ, ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದು ಅಲ್ಲ ಎಂಬುದು ಪೋಲೀಸರು ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಬಿಡಿ ಭಾಗಗಳಿಂದ ಬಹಿರಂಗವಾಗಿದೆಂದು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್‌ ತಿಳಿಸಿದ್ದಾರೆ.

ಬೆಟ್ಟದ ಮೇಲೆ ಎರಡು ಕಾಲುಗಳ ಮೇಲೆ ಅರ್ಧ ಭಾಗ ನಿಂತಿರುವಾಗ ವಶಪಡಿಸಿಕೊಂಡಿರುವ ಬಿಡಿ ಭಾಗಗಳಲ್ಲೂ ಎರಡು ಕಾಲು ಇದ್ದು ಪ್ರತಿಮೆಗೆ ನಾಲ್ಕು ಕಾಲು ಇರಲು ಹೇಗೆ ಸಾದ್ಯ ಎಂಬ ಪ್ರಶ್ನೆ ಮೂಡಿದೆ.
ಈ ಎಲ್ಲಾ ವಿಚಾರವಾಗಿ ಮೊದಲಿನಿಂದಲೂ ಜನತೆಗೆ ನಿರಂತರ ಸುಳ್ಳು ಹೇಳುತ್ತಾ ಬಂದಿರುವ ಶಾಸಕರು ಮಾಡಿರುವುದು ಧರ್ಮ ದ್ರೋಹದ ಕೆಲಸವಾಗಿದೆ ಅವರು ಇನ್ನಾದರೂ ತನ್ನೊಪ್ಪಿಕೊಂಡು ಕ್ಷಮೆಯಾಚಿಸ ಬೇಕೆಂದು ಮತ್ತು ಅವರ ತಕ್ಷಣ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಸಿದ್ಧತೆ ನಡೆಸಲಾಗುವುದು ಶುಭದರಾವ್ ಹೇಳಿದ್ದಾರೆ.

ಪ್ರತಿಮೆ ನಕಲಿ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ, ಪ್ರತಿಮೆ ಪೂರ್ಣಗೊಂಡ ಬಗ್ಗೆಯಾಗಲಿ, ಅಲ್ಲಿಂದ ಇಲ್ಲಿಗೆ ತಂದಿರುವ ಬಗ್ಗೆಯಾಗಲಿ ಯಾವುದೇ ದಾಖಲೆಗಳು ಯಾರ ಬಳಿಯೂ ಇಲ್ಲ, ಚುನಾವಣೆಯ ದೃಷ್ಟಿಯಿಂದ ತುರಾತುರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಪ್ರತಿಮೆ ನಿರ್ಮಾಣವಾಗದ ಕಾರಣ ಪೈಬರ್ ಪ್ರತಿಮೆಯನ್ನು ತಂದು ಉದ್ಘಾಟಿಸಲಾಗಿದೆ, ಅದರ ನಿಜ ಬಣ್ಣ ಬಯಲಾದಾಗ ರಾತ್ರಿಯಲ್ಲಿ ಅದನ್ನು ಕೊಂಡೊಯ್ದು ಪ್ರತಿಮೆಯ ರೂಪ ಬದಲಾವಣೆ ಇದೆ ಎಂದು ನಂಬಿಸಲಾಗಿದೆ. ಈಗ ವಶಪಡಿಸಿಕೊಂಡಿರುವ ಭಾಗಗಳು ಉದ್ಘಾಟನೆಯ ನಂತರ ತಯಾರಾದ ಭಾಗಗಳು ಎಂದು ಅಲ್ಲಿ ಸಿಕ್ಕಿರುವ ನಾಲ್ಕು ಕಾಲುಗಳಿಂದ ಸಾಬೀತಾಗಿದೆ, ಒಂದು ವೇಳೆ ಈಗ ಬೆಟ್ಟದ ಮೇಲಿರುವ ಪ್ರತಿಮೆ ಕಂಚಿದ್ದೇ ಆಗಿದ್ದರೆ ಮತ್ತೊಮ್ಮೆ ಕಾಲುಗಳನ್ನು ತಯಾರಿಸುವ ಅಗತ್ಯವಿತ್ತೇ ಎಂದು ಪ್ರಶ್ನಿಸಿ ಪ್ರತಿಮೆಯ ಮುಖದ ಭಾಗ ಸಂಪೂರ್ಣ ಬದಲಾಗಿದ್ದು ಅಂದಿನ ಮುಖಕ್ಕೆ ಹೋಲಿಕೆಯೇ ಇಲ್ಲ ಇದು ನಕಲಿ ಪ್ರತಿಮೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದಿದ್ದಾರೆ.

ಪ್ರತಿಮೆ ನಿರ್ಮಾತ ಕೃಷ್ಣನಾಯ್ಡ್ ಮಹಾನ್ ಸುಳ್ಳುಗಾರ ಇಲ್ಲವಾದರೆ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಅಗತ್ಯವೇನಿದೆ, ಈಗ ಜಾತಿ ಮತ್ತು ಧರ್ಮವನ್ನು ಎಳೆದು ತಂದು ಕೋಮು ಗಲಭೆಯ ಹುನ್ನಾರ ನಡೆಸುತ್ತಿದ್ದಾರೆ ಅವರ ವಿರುದ್ಧ ದೂರು ದಾಖಲಿಸಲಾಗುವುದು.

ಸತ್ಯವನ್ನು ಎಷ್ಟೇ ಮುಚ್ಚಿಟ್ಟರೂ ಅದು ಬಹಿರಂಗವಾಗಲೇ ಬೇಕು, ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನಪಟ್ಟಾಗ ಕಾಂಗ್ರೇಸ್ ಕಾರ್ಯಕರ್ತರ ಮೇಲೆ ಪೋಲೀಸ್ ಕೇಸು ದಾಖಲಿಸಿ ಬೆದರಿಸಲಾಯಿತು, ಅನ್ಯಾಯದ ವಿರುದ್ಧ ಮಾತನಾಡಿದವರನ್ನು ಅವಮಾನಿಸಲಾಯಿತು, ಅದರೆ ಸತ್ಯಕ್ಕೆ ಗೆಲುವಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

54 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

59 minutes ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago