Featured

ಕಾರ್ಕಳ: ಪರಶುರಾಮನ ಮೂರ್ತಿ ಬಾಕಿ ಭಾಗ ತೆರವುಗೊಳಿಸುವ ಹುನ್ನಾರ ; ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ – Vishwanews24

ಕಾರ್ಕಳ: ಪರಶುರಾಮನ ಮೂರ್ತಿ ಬಾಕಿ ಭಾಗ ತೆರವುಗೊಳಿಸುವ ಹುನ್ನಾರ ; ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಕಾರ್ಕಳ: ಬೈಲೂರಿನ ಪರಶುರಾಮನ ಮೂರ್ತಿ ಕಂಚಿನದ್ದಲ್ಲ, ನಕಲಿ ಎಂದು ಹೇಳಲು ಕೊನೆಯ ಸಾಕ್ಷಿ ಉಳಿದಿತ್ತು. ಅದನ್ನು ತೆರವುಗೊಳಿಸುವ ಹುನ್ನಾರ ನಡೆಯುತ್ತಿದ್ದು, ನಮ್ಮ ಪ್ರಬಲ ವಿರೋಧವಿದೆ ಎಂದು ಕಾಂಗ್ರೆಸ್‌ ಮುಖಂಡ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಮೂರ್ತಿಯ ಅರ್ಧ ಭಾಗ ತೆರವು ಗೊಳಿಸಲಾಗಿದೆ. ಮಳೆಗಾಲದಲ್ಲಿ ನೀರು ತುಂಬಿದರೆ ಮೂರ್ತಿ ಮುರಿದು ಬೀಳಬಹುದು ಎಂಬ ಕಾರಣ ನೀಡಿ ಟಾರ್ಪಾಲು ಹೊದೆಸುವುದಾಗಿ ತಿಳಿಸಿದ್ದರು. ಈಗ ಹೈಕೋರ್ಟ್‌ ಆದೇಶದಂತೆ ಮೂರ್ತಿಯ ಬಾಕಿ ಭಾಗವನ್ನು ತೆರವು ಗೊಳಿಸಿ ಶಿಲ್ಪಿಗೆ ಕೊಡುತ್ತಾರೆಂಬ ವಿಷಯ ತಹಶೀಲ್ದಾರ್‌ ಮೂಲಕ ನನಗೆ ತಿಳಿಯಿತು. ಇದು ಉಳಿದ ಸಾಕ್ಷ್ಯವನ್ನೂ ನಾಶ ಮಾಡುವ ಪ್ರಯತ್ನ ಎಂದು ಆರೋಪಿಸಿದರು.

ಕೆಂಪೇಗೌಡ, ಶಿವಾಜಿಯ ಮೂರ್ತಿಗಳನ್ನು ನಿರ್ಮಿಸಿದ ಹಲವು ಪ್ರತಿಭೆಗಳು ರಾಜ್ಯ ದಲ್ಲಿದ್ದಾರೆ. ಆದರೂ ಜಿಎಸ್‌ಟಿ ಡಿಫಾಲ್ಟರ್‌ ಆಗಿರುವ ಕೃಷ್ಣ ನಾಯ್ಕ ಅವರಿಗೆ ಯಾವುದೇ ಅರ್ಹತೆ ಇಲ್ಲದಿದ್ದರೂ ಮೂರ್ತಿ ಮಾಡಲು ನೀಡಲಾಗಿದೆ ಎಂದು ಆಪಾದಿಸಿದ ಅವರು, ಈಗ ತರಾತುರಿಯಲ್ಲಿ ಮೂರ್ತಿಯ ಉಳಿದ ಭಾಗವನ್ನು ಕೃಷ್ಣ ನಾಯಕ್‌ರಿಗೆ ನೀಡಿ ಏನು ಸಾಧಿಸುವುದಿದೆ? ಇದು ಸಾಕ್ಷ್ಯ ಅಳಿಸುವ ಹುನ್ನಾರವಲ್ಲದೇ ಮತ್ತೇನೂ ಅಲ್ಲ ಎಂದರು.

ಪ್ರತಿಮೆಯನ್ನು ಸುನಿಲರೇ ಸ್ಥಾಪಿಸಲಿ ಪರಶುರಾಮನ ಮೂರ್ತಿಯ ಈ ಸ್ಥಿತಿಗೆ ಸುನಿಲ್‌ ಕುಮಾರ್‌ ಹಾಗೂ ಅವರ ಹಿಂಬಾಲಕರೇ ಕಾರಣ. ಮೂರ್ತಿ ಯಾವುದರಿಂದ ತಯಾರಾ ದದ್ದು (ಫೈಬರ್‌ /ಕಂಚು) ಎಂಬ ತನಿಖೆಯಾಗಲಿ ಎಂದ ಅವರು, 2 ಕೋಟಿ ರೂ. ವೆಚ್ಚದ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ 2.5. ಕೋಟಿ ರೂ.ಗಳನ್ನು ಸುನಿಲ್‌ ಕುಮಾರ್‌ ಖರ್ಚು ಮಾಡಿಸಿದ್ದಾರೆ ಎಂದು ಟೀಕಿಸಿದರು.

 

ನಮ್ಮ ಉದ್ದೇಶ ಅಲ್ಲಿ ಸ್ಥಾಪಿಸ ಬೇಕಿದ್ದ ಪರಶುರಾಮನ ಕಂಚಿನ ಮೂರ್ತಿಯನ್ನು ಸುನಿಲ್‌ ಕುಮಾರ್‌ ಅವರೇ ಸ್ಥಾಪಿಸಲಿ. ಆದರೆ ಕೃಷ್ಣ ನಾಯಕ್‌ ಅವರಿಗೆ ಪುನಃ ಕೆಲಸ ನೀಡಬಾರದು. ನಿರ್ಮಿತಿ ಕೇಂದ್ರದವರಿಗೆ ಈ ಮೂರ್ತಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬಾರದು. ಸಂಪೂರ್ಣ ತನಿಖೆಯ ಬಳಿಕವೇ ಪರಿಣಿತರಿಂದ ಥೀಂ ಪಾರ್ಕ್‌ ಕೆಲಸ ಮುಂದುವರಿಸಬೇಕು ಎಂದು ಆಗ್ರಹಿಸಿದರು.ಸದಾಶಿವ ದೇವಾಡಿಗ, ಉದಯ ಕುಮಾರ್‌ ಶೆಟ್ಟಿ ಕುಕ್ಕುಂದೂರು, ಜಾರ್ಜ್‌ ಕ್ಯಾಸ್ತಲಿನೋ ಉಪಸ್ಥಿತರಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago