ಕಾರ್ಕಳ: ಬೈಲೂರಿನ ಪರಶುರಾಮನ ಮೂರ್ತಿ ಕಂಚಿನದ್ದಲ್ಲ, ನಕಲಿ ಎಂದು ಹೇಳಲು ಕೊನೆಯ ಸಾಕ್ಷಿ ಉಳಿದಿತ್ತು. ಅದನ್ನು ತೆರವುಗೊಳಿಸುವ ಹುನ್ನಾರ ನಡೆಯುತ್ತಿದ್ದು, ನಮ್ಮ ಪ್ರಬಲ ವಿರೋಧವಿದೆ ಎಂದು ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಮೂರ್ತಿಯ ಅರ್ಧ ಭಾಗ ತೆರವು ಗೊಳಿಸಲಾಗಿದೆ. ಮಳೆಗಾಲದಲ್ಲಿ ನೀರು ತುಂಬಿದರೆ ಮೂರ್ತಿ ಮುರಿದು ಬೀಳಬಹುದು ಎಂಬ ಕಾರಣ ನೀಡಿ ಟಾರ್ಪಾಲು ಹೊದೆಸುವುದಾಗಿ ತಿಳಿಸಿದ್ದರು. ಈಗ ಹೈಕೋರ್ಟ್ ಆದೇಶದಂತೆ ಮೂರ್ತಿಯ ಬಾಕಿ ಭಾಗವನ್ನು ತೆರವು ಗೊಳಿಸಿ ಶಿಲ್ಪಿಗೆ ಕೊಡುತ್ತಾರೆಂಬ ವಿಷಯ ತಹಶೀಲ್ದಾರ್ ಮೂಲಕ ನನಗೆ ತಿಳಿಯಿತು. ಇದು ಉಳಿದ ಸಾಕ್ಷ್ಯವನ್ನೂ ನಾಶ ಮಾಡುವ ಪ್ರಯತ್ನ ಎಂದು ಆರೋಪಿಸಿದರು.
ಕೆಂಪೇಗೌಡ, ಶಿವಾಜಿಯ ಮೂರ್ತಿಗಳನ್ನು ನಿರ್ಮಿಸಿದ ಹಲವು ಪ್ರತಿಭೆಗಳು ರಾಜ್ಯ ದಲ್ಲಿದ್ದಾರೆ. ಆದರೂ ಜಿಎಸ್ಟಿ ಡಿಫಾಲ್ಟರ್ ಆಗಿರುವ ಕೃಷ್ಣ ನಾಯ್ಕ ಅವರಿಗೆ ಯಾವುದೇ ಅರ್ಹತೆ ಇಲ್ಲದಿದ್ದರೂ ಮೂರ್ತಿ ಮಾಡಲು ನೀಡಲಾಗಿದೆ ಎಂದು ಆಪಾದಿಸಿದ ಅವರು, ಈಗ ತರಾತುರಿಯಲ್ಲಿ ಮೂರ್ತಿಯ ಉಳಿದ ಭಾಗವನ್ನು ಕೃಷ್ಣ ನಾಯಕ್ರಿಗೆ ನೀಡಿ ಏನು ಸಾಧಿಸುವುದಿದೆ? ಇದು ಸಾಕ್ಷ್ಯ ಅಳಿಸುವ ಹುನ್ನಾರವಲ್ಲದೇ ಮತ್ತೇನೂ ಅಲ್ಲ ಎಂದರು.
ಪ್ರತಿಮೆಯನ್ನು ಸುನಿಲರೇ ಸ್ಥಾಪಿಸಲಿ ಪರಶುರಾಮನ ಮೂರ್ತಿಯ ಈ ಸ್ಥಿತಿಗೆ ಸುನಿಲ್ ಕುಮಾರ್ ಹಾಗೂ ಅವರ ಹಿಂಬಾಲಕರೇ ಕಾರಣ. ಮೂರ್ತಿ ಯಾವುದರಿಂದ ತಯಾರಾ ದದ್ದು (ಫೈಬರ್ /ಕಂಚು) ಎಂಬ ತನಿಖೆಯಾಗಲಿ ಎಂದ ಅವರು, 2 ಕೋಟಿ ರೂ. ವೆಚ್ಚದ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ 2.5. ಕೋಟಿ ರೂ.ಗಳನ್ನು ಸುನಿಲ್ ಕುಮಾರ್ ಖರ್ಚು ಮಾಡಿಸಿದ್ದಾರೆ ಎಂದು ಟೀಕಿಸಿದರು.
ನಮ್ಮ ಉದ್ದೇಶ ಅಲ್ಲಿ ಸ್ಥಾಪಿಸ ಬೇಕಿದ್ದ ಪರಶುರಾಮನ ಕಂಚಿನ ಮೂರ್ತಿಯನ್ನು ಸುನಿಲ್ ಕುಮಾರ್ ಅವರೇ ಸ್ಥಾಪಿಸಲಿ. ಆದರೆ ಕೃಷ್ಣ ನಾಯಕ್ ಅವರಿಗೆ ಪುನಃ ಕೆಲಸ ನೀಡಬಾರದು. ನಿರ್ಮಿತಿ ಕೇಂದ್ರದವರಿಗೆ ಈ ಮೂರ್ತಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬಾರದು. ಸಂಪೂರ್ಣ ತನಿಖೆಯ ಬಳಿಕವೇ ಪರಿಣಿತರಿಂದ ಥೀಂ ಪಾರ್ಕ್ ಕೆಲಸ ಮುಂದುವರಿಸಬೇಕು ಎಂದು ಆಗ್ರಹಿಸಿದರು.ಸದಾಶಿವ ದೇವಾಡಿಗ, ಉದಯ ಕುಮಾರ್ ಶೆಟ್ಟಿ ಕುಕ್ಕುಂದೂರು, ಜಾರ್ಜ್ ಕ್ಯಾಸ್ತಲಿನೋ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…