Featured

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನನ್ನದಲ್ಲ, ಅದು ಸಮಾಜದ ಆಸ್ತಿ ; ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು : ಸುನಿಲ್‌ ಕುಮಾರ್‌  – Vishwanews24

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನನ್ನದಲ್ಲ, ಅದು ಸಮಾಜದ ಆಸ್ತಿ ; ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು : ಸುನಿಲ್‌ ಕುಮಾರ್‌

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನನ್ನದಲ್ಲ. ಅದು ಸಮಾಜದ ಆಸ್ತಿ. ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಜನಾಗ್ರಹ ಸಮಿತಿ ಪರಶುರಾಮ ಥೀಂ ಪಾರ್ಕ್‌ ಯರ್ಲಪ್ಪಾಡಿ ವತಿಯಿಂದ ಥೀಂ ಪಾರ್ಕ್‌  ಕಾಮಗಾರಿ ಮುಂದು ವರಿಸುವಂತೆ ಆಗ್ರಹಿಸಿ ಬೈಲೂರಿನಲ್ಲಿ ಸೋಮವಾರ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಥೀಂ ಪಾರ್ಕ್‌ ಕುರಿತು ಅಪಪ್ರಚಾರ ಚುನಾವಣೆ ಅನಂತರ ನಡೆಯುತ್ತ ಬಂದಿದೆ. ಸತ್ಯವನ್ನು ಎಂದಿಗೂ ಬಚ್ಚಿಡಲು ಸಾಧ್ಯವಿಲ್ಲ. ಕಾರ್ಕಳವನ್ನು ಯಾರು ಪ್ರೀತಿಸುತ್ತಾರೋ ಅವರಿಗೆ ಅಭಿವೃದ್ಧಿ ಮಾಡಬೇಕು ಎನಿಸುತ್ತದೆ. ಮೂರ್ತಿಯ ಗುಣಮಟ್ಟದಲ್ಲಿ ವ್ಯತ್ಯಾಸವಾಗಿದ್ದರೆ ತನಿಖೆ ಮಾಡಿ, ತನಿಖೆಯ ನೆಪದಲ್ಲಿ ಕಾಮಗಾರಿಯನ್ನು ನಿಲ್ಲಿಸಬೇಡಿ ಎಂದರು.

 

ಪರಶುರಾಮ ಮೂರ್ತಿಯ ವಿನ್ಯಾಸ ಗಾರ ಜಿಎಸ್‌ಟಿ ಕಟ್ಟಿಲ್ಲ ಎನ್ನುತ್ತಾರೆ. ತೆರಿಗೆ ಕಟ್ಟಿಲ್ಲವೆಂದು ದಾಳಿಯಾಗಿರುವುದು ನಿಮ್ಮದೇ ಮನೆಗೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದರು. ಇಲ್ಲಿವರೆಗೆ ಯಾಕೆ ಸಿಐಡಿ ತನಿಖೆಯಾಗಿಲ್ಲ. ವಿಗ್ರಹಕ್ಕೆ ಬಳಸಿರುವ ಲೋಹ ಯಾವುದೆಂದು ಹೇಳಲು ಒಂದು ವರ್ಷ ಬೇಕಿತ್ತಾ? ಸರಕಾರ ಕಾಲಹರಣ ಮಾಡಿ ಪ್ರವಾಸೋದ್ಯಮವನ್ನು ಸರ್ವನಾಶ ಮಾಡಿದೆ ಎಂದು ದೂರಿದರು.

ರಾಮ ಮಂದಿರ ಟ್ರಸ್ಟ್‌ನ ಅಧ್ಯಕ್ಷ ಓಂಕಾರ್‌ ನಾಯಕ್‌, ಮಹೇಶ್‌ ಶೆಟ್ಟಿಕುಡ್ಪುಲಾಜೆ, ಜನಾಗ್ರಹ ಸಮಿತಿ ಸಂಚಾಲಕ ಕೌಡೂರು ಸಚ್ಚಿದಾನಂದ ಶೆಟ್ಟಿ, ಸುಮಿತ್‌ ಶೆಟ್ಟಿ ಕೌಡೂರ್‌ ಮಾತನಾಡಿ, ಮುಂದೆ ದೊಡ್ಡ ಮಟ್ಟದ ಹೋರಾಟ ರೂಪಿಸುವ ಎಚ್ಚರಿಕೆ ನೀಡಿದರು. ಗ್ರಾ.ಪಂ.ಗಳ ಅಧ್ಯಕ್ಷರಾದ ಸುನೀಲ್‌ ಹೆಗ್ಡೆ, ಸುಜಾತ, ಉಷಾ, ಸುನಿತಾ, ಸಚ್ಚಿದಾನಂದ ಪ್ರಭು, ಬೈಲೂರು ಬೀದಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸದಾನಂದ ಸಾಲ್ಯಾನ್‌ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

21 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago