ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನನ್ನದಲ್ಲ. ಅದು ಸಮಾಜದ ಆಸ್ತಿ. ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಜನಾಗ್ರಹ ಸಮಿತಿ ಪರಶುರಾಮ ಥೀಂ ಪಾರ್ಕ್ ಯರ್ಲಪ್ಪಾಡಿ ವತಿಯಿಂದ ಥೀಂ ಪಾರ್ಕ್ ಕಾಮಗಾರಿ ಮುಂದು ವರಿಸುವಂತೆ ಆಗ್ರಹಿಸಿ ಬೈಲೂರಿನಲ್ಲಿ ಸೋಮವಾರ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.
ಥೀಂ ಪಾರ್ಕ್ ಕುರಿತು ಅಪಪ್ರಚಾರ ಚುನಾವಣೆ ಅನಂತರ ನಡೆಯುತ್ತ ಬಂದಿದೆ. ಸತ್ಯವನ್ನು ಎಂದಿಗೂ ಬಚ್ಚಿಡಲು ಸಾಧ್ಯವಿಲ್ಲ. ಕಾರ್ಕಳವನ್ನು ಯಾರು ಪ್ರೀತಿಸುತ್ತಾರೋ ಅವರಿಗೆ ಅಭಿವೃದ್ಧಿ ಮಾಡಬೇಕು ಎನಿಸುತ್ತದೆ. ಮೂರ್ತಿಯ ಗುಣಮಟ್ಟದಲ್ಲಿ ವ್ಯತ್ಯಾಸವಾಗಿದ್ದರೆ ತನಿಖೆ ಮಾಡಿ, ತನಿಖೆಯ ನೆಪದಲ್ಲಿ ಕಾಮಗಾರಿಯನ್ನು ನಿಲ್ಲಿಸಬೇಡಿ ಎಂದರು.
ಪರಶುರಾಮ ಮೂರ್ತಿಯ ವಿನ್ಯಾಸ ಗಾರ ಜಿಎಸ್ಟಿ ಕಟ್ಟಿಲ್ಲ ಎನ್ನುತ್ತಾರೆ. ತೆರಿಗೆ ಕಟ್ಟಿಲ್ಲವೆಂದು ದಾಳಿಯಾಗಿರುವುದು ನಿಮ್ಮದೇ ಮನೆಗೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದರು. ಇಲ್ಲಿವರೆಗೆ ಯಾಕೆ ಸಿಐಡಿ ತನಿಖೆಯಾಗಿಲ್ಲ. ವಿಗ್ರಹಕ್ಕೆ ಬಳಸಿರುವ ಲೋಹ ಯಾವುದೆಂದು ಹೇಳಲು ಒಂದು ವರ್ಷ ಬೇಕಿತ್ತಾ? ಸರಕಾರ ಕಾಲಹರಣ ಮಾಡಿ ಪ್ರವಾಸೋದ್ಯಮವನ್ನು ಸರ್ವನಾಶ ಮಾಡಿದೆ ಎಂದು ದೂರಿದರು.
ರಾಮ ಮಂದಿರ ಟ್ರಸ್ಟ್ನ ಅಧ್ಯಕ್ಷ ಓಂಕಾರ್ ನಾಯಕ್, ಮಹೇಶ್ ಶೆಟ್ಟಿಕುಡ್ಪುಲಾಜೆ, ಜನಾಗ್ರಹ ಸಮಿತಿ ಸಂಚಾಲಕ ಕೌಡೂರು ಸಚ್ಚಿದಾನಂದ ಶೆಟ್ಟಿ, ಸುಮಿತ್ ಶೆಟ್ಟಿ ಕೌಡೂರ್ ಮಾತನಾಡಿ, ಮುಂದೆ ದೊಡ್ಡ ಮಟ್ಟದ ಹೋರಾಟ ರೂಪಿಸುವ ಎಚ್ಚರಿಕೆ ನೀಡಿದರು. ಗ್ರಾ.ಪಂ.ಗಳ ಅಧ್ಯಕ್ಷರಾದ ಸುನೀಲ್ ಹೆಗ್ಡೆ, ಸುಜಾತ, ಉಷಾ, ಸುನಿತಾ, ಸಚ್ಚಿದಾನಂದ ಪ್ರಭು, ಬೈಲೂರು ಬೀದಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸದಾನಂದ ಸಾಲ್ಯಾನ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…