ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನನ್ನದಲ್ಲ. ಅದು ಸಮಾಜದ ಆಸ್ತಿ. ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಜನಾಗ್ರಹ ಸಮಿತಿ ಪರಶುರಾಮ ಥೀಂ ಪಾರ್ಕ್ ಯರ್ಲಪ್ಪಾಡಿ ವತಿಯಿಂದ ಥೀಂ ಪಾರ್ಕ್ ಕಾಮಗಾರಿ ಮುಂದು ವರಿಸುವಂತೆ ಆಗ್ರಹಿಸಿ ಬೈಲೂರಿನಲ್ಲಿ ಸೋಮವಾರ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.
ಥೀಂ ಪಾರ್ಕ್ ಕುರಿತು ಅಪಪ್ರಚಾರ ಚುನಾವಣೆ ಅನಂತರ ನಡೆಯುತ್ತ ಬಂದಿದೆ. ಸತ್ಯವನ್ನು ಎಂದಿಗೂ ಬಚ್ಚಿಡಲು ಸಾಧ್ಯವಿಲ್ಲ. ಕಾರ್ಕಳವನ್ನು ಯಾರು ಪ್ರೀತಿಸುತ್ತಾರೋ ಅವರಿಗೆ ಅಭಿವೃದ್ಧಿ ಮಾಡಬೇಕು ಎನಿಸುತ್ತದೆ. ಮೂರ್ತಿಯ ಗುಣಮಟ್ಟದಲ್ಲಿ ವ್ಯತ್ಯಾಸವಾಗಿದ್ದರೆ ತನಿಖೆ ಮಾಡಿ, ತನಿಖೆಯ ನೆಪದಲ್ಲಿ ಕಾಮಗಾರಿಯನ್ನು ನಿಲ್ಲಿಸಬೇಡಿ ಎಂದರು.
ಪರಶುರಾಮ ಮೂರ್ತಿಯ ವಿನ್ಯಾಸ ಗಾರ ಜಿಎಸ್ಟಿ ಕಟ್ಟಿಲ್ಲ ಎನ್ನುತ್ತಾರೆ. ತೆರಿಗೆ ಕಟ್ಟಿಲ್ಲವೆಂದು ದಾಳಿಯಾಗಿರುವುದು ನಿಮ್ಮದೇ ಮನೆಗೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದರು. ಇಲ್ಲಿವರೆಗೆ ಯಾಕೆ ಸಿಐಡಿ ತನಿಖೆಯಾಗಿಲ್ಲ. ವಿಗ್ರಹಕ್ಕೆ ಬಳಸಿರುವ ಲೋಹ ಯಾವುದೆಂದು ಹೇಳಲು ಒಂದು ವರ್ಷ ಬೇಕಿತ್ತಾ? ಸರಕಾರ ಕಾಲಹರಣ ಮಾಡಿ ಪ್ರವಾಸೋದ್ಯಮವನ್ನು ಸರ್ವನಾಶ ಮಾಡಿದೆ ಎಂದು ದೂರಿದರು.
ರಾಮ ಮಂದಿರ ಟ್ರಸ್ಟ್ನ ಅಧ್ಯಕ್ಷ ಓಂಕಾರ್ ನಾಯಕ್, ಮಹೇಶ್ ಶೆಟ್ಟಿಕುಡ್ಪುಲಾಜೆ, ಜನಾಗ್ರಹ ಸಮಿತಿ ಸಂಚಾಲಕ ಕೌಡೂರು ಸಚ್ಚಿದಾನಂದ ಶೆಟ್ಟಿ, ಸುಮಿತ್ ಶೆಟ್ಟಿ ಕೌಡೂರ್ ಮಾತನಾಡಿ, ಮುಂದೆ ದೊಡ್ಡ ಮಟ್ಟದ ಹೋರಾಟ ರೂಪಿಸುವ ಎಚ್ಚರಿಕೆ ನೀಡಿದರು. ಗ್ರಾ.ಪಂ.ಗಳ ಅಧ್ಯಕ್ಷರಾದ ಸುನೀಲ್ ಹೆಗ್ಡೆ, ಸುಜಾತ, ಉಷಾ, ಸುನಿತಾ, ಸಚ್ಚಿದಾನಂದ ಪ್ರಭು, ಬೈಲೂರು ಬೀದಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸದಾನಂದ ಸಾಲ್ಯಾನ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…