Featured

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ – Vishwanews24

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಕಾರ್ಕಳ : ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ಕಳೆದ ಅ. 22ರಂದು ಪರಶುರಾಮ ಥೀಂ ಪಾಕ್೯ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು.

ಇದೇ ಸಂದರ್ಭ ತೆರವು ಮಾಡಲಾದ ಪ್ರತಿಮೆಯ ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಕಾಂಗ್ರೆಸ್ ಮುಖಂಡರು ಸಾರ್ವಜನಿಕರಿಗೆ ಮಾಹಿತಿ ನೀಡುವ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದ್ದವು. ಇದನ್ನಾಧರಿಸಿ ಎರ್ಲಪಾಡಿ ಗ್ರಾ.ಪಂ. ಅಧ್ಯಕ್ಷ ಸುನಿಲ್ ಹೆಗ್ಡೆ ಕಾರ್ಕಳ ನಗರ ಠಾಣೆಗೆ ನೀಡಿದ ದೂರಿನನ್ವಯ ಕಾಂಗ್ರೆಸ್ ಮುಖಂಡರಾದ ಪುರಸಭೆ ಸದಸ್ಯ ಶುಭದ ರಾವ್, ಮಾಜಿ ಅಧ್ಯಕ್ಷ ಸುಭಿತ್ ಕುಮಾರ್, ಮಾಜಿ ಸದಸ್ಯ ವಿವೇಕಾನಂದ ಶೆಣೈ ಮತ್ತು ಐವನ್ ಮಿರಾಂಡ ಸೇರಿದಂತೆ ಒಟ್ಟು 4 ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ಐಪಿಎಸ್ ಸೆಕ್ಷನ್ 442, 505(2) ಮತ್ತು 34 ಪ್ರಕಾರ ಕೇಸು ದಾಖಲಿಸಿದ್ದರು.

ಇದೇ ಪ್ರಕರಣವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಪರಿಣಾಮ, ಏ.4ರಂದು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಕೆರೆಬೆಟ್ಟು ಪ್ರಸನ್ನ ಶೆಟ್ಟಿ ಈ ಪ್ರಕರಣದ ಬಗ್ಗೆ ವಾದಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago