Featured

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ – Vishwanews24

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್‌: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಕಾರ್ಕಳ : ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ಕಳೆದ ಅ. 22ರಂದು ಪರಶುರಾಮ ಥೀಂ ಪಾಕ್೯ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು.

ಇದೇ ಸಂದರ್ಭ ತೆರವು ಮಾಡಲಾದ ಪ್ರತಿಮೆಯ ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಕಾಂಗ್ರೆಸ್ ಮುಖಂಡರು ಸಾರ್ವಜನಿಕರಿಗೆ ಮಾಹಿತಿ ನೀಡುವ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದ್ದವು. ಇದನ್ನಾಧರಿಸಿ ಎರ್ಲಪಾಡಿ ಗ್ರಾ.ಪಂ. ಅಧ್ಯಕ್ಷ ಸುನಿಲ್ ಹೆಗ್ಡೆ ಕಾರ್ಕಳ ನಗರ ಠಾಣೆಗೆ ನೀಡಿದ ದೂರಿನನ್ವಯ ಕಾಂಗ್ರೆಸ್ ಮುಖಂಡರಾದ ಪುರಸಭೆ ಸದಸ್ಯ ಶುಭದ ರಾವ್, ಮಾಜಿ ಅಧ್ಯಕ್ಷ ಸುಭಿತ್ ಕುಮಾರ್, ಮಾಜಿ ಸದಸ್ಯ ವಿವೇಕಾನಂದ ಶೆಣೈ ಮತ್ತು ಐವನ್ ಮಿರಾಂಡ ಸೇರಿದಂತೆ ಒಟ್ಟು 4 ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ಐಪಿಎಸ್ ಸೆಕ್ಷನ್ 442, 505(2) ಮತ್ತು 34 ಪ್ರಕಾರ ಕೇಸು ದಾಖಲಿಸಿದ್ದರು.

ಇದೇ ಪ್ರಕರಣವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಪರಿಣಾಮ, ಏ.4ರಂದು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಕೆರೆಬೆಟ್ಟು ಪ್ರಸನ್ನ ಶೆಟ್ಟಿ ಈ ಪ್ರಕರಣದ ಬಗ್ಗೆ ವಾದಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago