ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ – Vishwanews24

Featured, ಉಡುಪಿ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ಕಾರ್ಕಳ : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಮಂಗಳೂರು: ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಡಿ.ಕೆ. ಸುರೇಶ್‌ ವಿರುದ್ಧ ದೂರು ಸ್ವೀಕರಿಸಿದ ಕೋರ್ಟ್ , ಫೆ. 12ಕ್ಕೆ ವಿಚಾರಣೆ  – Vishwanews24

ಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್‌ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ, ತೂಕ 15 ಟನ್ ಎಂದು ಪ್ರಚಾರ ಮಾಡಲಾಗಿತ್ತು. ಕೊನೆಗೆ ಕಂಚಿನ ಪ್ರತಿಮೆ ಎಂದು ಪ್ರಚಾರ ನೀಡಲಾದ ಪ್ರತಿಮೆ ‘ಫೈಬರ್‌’ನಿಂದ ನಿರ್ಮಿಸಲ್ಪಟ್ಟಿದೆ ಎಂಬುದು ಬೆಳಕಿಗೆ ಬಂದಿತ್ತು. ಅಲ್ಲದೆ ಚುನಾವಣಾ ಫಲಿತಾಂಶ ಬಂದ ಬಳಿಕ ಪರಶುರಾಮನ ಪ್ರತಿಮೆಯನ್ನು ರಾತ್ರೋರಾತ್ರಿ ಮಾಯಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿದ್ದವು.

ಉಡುಪಿ :ಜನರ ಸಮಸ್ಯೆಗಳ ದೂರುಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು: ಯಶ್‌ಪಾಲ್ ಎ ಸುವರ್ಣ – Vishwanews24

Leave a Reply