ಉಡುಪಿ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ – Vishwanews24

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ಕಾರ್ಕಳ : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್‌ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ, ತೂಕ 15 ಟನ್ ಎಂದು ಪ್ರಚಾರ ಮಾಡಲಾಗಿತ್ತು. ಕೊನೆಗೆ ಕಂಚಿನ ಪ್ರತಿಮೆ ಎಂದು ಪ್ರಚಾರ ನೀಡಲಾದ ಪ್ರತಿಮೆ ‘ಫೈಬರ್‌’ನಿಂದ ನಿರ್ಮಿಸಲ್ಪಟ್ಟಿದೆ ಎಂಬುದು ಬೆಳಕಿಗೆ ಬಂದಿತ್ತು. ಅಲ್ಲದೆ ಚುನಾವಣಾ ಫಲಿತಾಂಶ ಬಂದ ಬಳಿಕ ಪರಶುರಾಮನ ಪ್ರತಿಮೆಯನ್ನು ರಾತ್ರೋರಾತ್ರಿ ಮಾಯಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿದ್ದವು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago