ಕಾರ್ಕಳ : ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ, ತೂಕ 15 ಟನ್ ಎಂದು ಪ್ರಚಾರ ಮಾಡಲಾಗಿತ್ತು. ಕೊನೆಗೆ ಕಂಚಿನ ಪ್ರತಿಮೆ ಎಂದು ಪ್ರಚಾರ ನೀಡಲಾದ ಪ್ರತಿಮೆ ‘ಫೈಬರ್’ನಿಂದ ನಿರ್ಮಿಸಲ್ಪಟ್ಟಿದೆ ಎಂಬುದು ಬೆಳಕಿಗೆ ಬಂದಿತ್ತು. ಅಲ್ಲದೆ ಚುನಾವಣಾ ಫಲಿತಾಂಶ ಬಂದ ಬಳಿಕ ಪರಶುರಾಮನ ಪ್ರತಿಮೆಯನ್ನು ರಾತ್ರೋರಾತ್ರಿ ಮಾಯಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಅನೇಕ ಪ್ರತಿಭಟನೆಗಳು ನಡೆದಿದ್ದವು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…