ಉಡುಪಿ: ”ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್, ”ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ.ಸರಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ” ಎಂದು ಬರೆದಿದ್ದಾರೆ.
”ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು” ಎಂದು ಕೊನೆಯಲ್ಲಿ ಸೇರಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…