Featured

ಕಾರ್ಕಳ:  ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್ – vishwanews24

ಕಾರ್ಕಳ:  ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದವರು ಕಾಂಗ್ರೆಸ್ ನ ಬ್ರದರ್ಸ್ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ‘ಪರಶುರಾಮ ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್ನ ಬ್ರದರ್ಸ್..! ಥೀಂಪಾರ್ಕ್ ಪಾಳು ಬೀಳುವಂತೆ ಮಾಡಿದ್ದು ಕಾಂಗ್ರೆಸ್. ಕಳೆದ ವಾರ ಥೀಂ ಪಾರ್ಕ್ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಭಾರತದ ಶ್ರದ್ಧಾ ಕೇಂದ್ರಗಳನ್ನು ಘಜ್ನಿ, ಘೋರಿ, ಖಿಲ್ಜಿ, ಮೊಘಲರು ಒಡೆದರೆ ಥೀಂ ಪಾರ್ಕ್ನ ಮೇಲ್ಚಾವಣಿ ಕದ್ದವರು ಅವರ ವಂಶಸ್ಥರು. ಕಾರ್ಕಳ ಕಾಂಗ್ರೆಸ್ ಮಖಂಡರು ಈಗ ಏನೆನ್ನುತ್ತಾರೆ? ಪರಶುರಾಮ ಸೃಷ್ಟಿ ಎಂದು ಹೆಸರಾದ ಕರಾವಳಿಯಲ್ಲಿ ಪರಶುರಾಮನ ಹೆಜ್ಜೆಗುರುತುಗಳು ಇರಬಾರದು ಎಂದು ಥೀಂ ಪಾರ್ಕ್ ಕಾಮಗಾರಿಯನ್ನು ನೀವು ಅರ್ಧಕ್ಕೆ ನಿಲ್ಲಿಸಿದ್ದಿರಿ’ ಎಂದು ವಾಗ್ದಾಳಿ ಮಾಡಿದ್ದಾರೆ.

‘ಹಿಂದು ಭಾವನೆಗಳಿಗೆ ಘಾಸಿ ಮಾಡಿರುವ ಜತೆಗೆ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡಿದ ನಿಮ್ಮ ತಪ್ಪು ಮುಂದಿನ ಚುನಾವಣೆಯವರೆಗಲ್ಲ, ಶತಶತಮಾನಗಳವರೆಗೂ ಸ್ಥಾಯಿಯಾಗಿರುತ್ತದೆ. ಇಲ್ಲಿಂದಲೇ ಕಾಂಗ್ರೆಸ್ ಅಧಃಪತನದ ಕ್ಷಣಗಣನೆ ಪ್ರಾರಂಭ’ ಎಂದು ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಬಂಧಿತರು. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago