ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ ; ಮಧ್ಯಂತರ ತಡೆ ನೀಡಿದ ಹೈ ಕೋರ್ಟ್ – vishwanews24
ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ- ಮಧ್ಯಂತರ ತಡೆ ನೀಡಿದ ಹೈ ಕೋರ್ಟ್
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪುಕರಣದ ಸಂಬಂಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್ಐಆ ಹಾಗೂ ಕಾರ್ಕಳ ಜೆಎಂಎಸ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ – vishwanews24
ಸ್ವಲ್ಪ ಸಮಯ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಪೀಠ ಬಳಿಕ ಅರ್ಜಿದಾರರ ವಿರುದ್ಧದ ಪುಕರಣಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು.
