ಕಾರ್ಕಳ: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ ಬಂದಿರುತ್ತದೆ.
ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಖಾಸಗಿಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ ನೇತೃತ್ವತ್ವದಲ್ಲಿ ನಡೆಯಿತು.
ಸಮಿತಿಯ ಸಲಹೆಗಾರರಾದ ವಿಶ್ವಾಸ್ ವಿ ಅಮೀನ್, ಉಪಾಧ್ಯಕ್ಶರಾದ ನಲ್ಲೂರು ಪ್ರದೀಪ್ ಶೆಟ್ಟಿ , ಬೆಳುವಾಯಿಯ ನಿತಿನ್ ಪೂಜಾರಿ ರವರು , ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪ್ ಕುಲಾಲ್,ಜತೆ ಕಾರ್ಯದರ್ಶಿವರಾದ ಬೋಳದ ಸಂತೋಷ ರವರ ಜೊತೆ ಕೋಶಾಧಿಕಾರಿಯಾದ ಹವಾಲ್ದಾರ್ ಬೆಟ್ಟು ಶಶಿಧರ ರವರು ಉಪಸ್ಥಿತರಿದ್ದರು.
ಸಮಿತಿಯ ಸದಸ್ಯರಾದ ಪೆರ್ಡೂರು ನವೀನ್ ಸಾಲಿಯಾನ್, ಚೇರ್ಕಾಡಿಯ ವಿಗ್ನೇಶ್, ಕಡ್ತಲದ ಹರೀಶ್ ಪೂಜಾರಿ, ಹೆಬ್ರಿ ಚಾರದ ದಿನೇಶ್ ಕುಮಾರ್ ಮತ್ತು ಮರ್ಣೆ ರಾಜೇಶ್ ಶೆಟ್ಟಿಯವರು ಸಭೆಯಲ್ಲಿದ್ದು ಸಮಿತಿಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…