Featured

ಕಾರ್ಕಳ ಪರಶುರಾಮ ಮೂರ್ತಿ ಹಿತ್ತಾಳೆಯಿಂದ ನಿರ್ಮಿಸಿರುವುದೇ ಹೊರತು ಕಂಚಿನದಲ್ಲ: ತನಿಖೆಯಿಂದ ಸಾಬೀತು – vishwanews24

ಕಾರ್ಕಳ ಪರಶುರಾಮ ಮೂರ್ತಿ ಹಿತ್ತಾಳೆಯಿಂದ ನಿರ್ಮಿಸಿರುವುದೇ ಹೊರತು ಕಂಚಿನದಲ್ಲ: ತನಿಖೆಯಿಂದ ಸಾಬೀತು

ಉಡುಪಿ : ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ 2024ರ ಜೂ.21ರಂದು ಕಾರ್ಕಳದ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ್ದು, ಶಿಲ್ಪಿಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯ ಬದಲು ಹಿತ್ತಾಳೆ ಲೋಹದಿಂದ ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಅದೇ ರೀತಿ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ವರ್ಕ್ ಆರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸದೆ, 2023ರ ಅ.12ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಉಮ್ಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿರುವ ಶೆಡ್‌ನಲ್ಲಿ 2024ರ ಫೆ.25ರ ತನಕ ಇರಿಸಿಕೊಂಡಿದ್ದರು.

ಆದರೆ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಶಿಲ್ಪಿ ಕೃಷ್ಣ ನಾಯ್ಕಗೆ ಹಸ್ತಾಂತರ ಮಾಡಿದ್ದು, ಆತ ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ಅರುಣ್ ಕುಮಾರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಮೂಲಕ ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುವುದು ಕಂಡುಬಂದಿದೆ. ಅವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಪೊಲೀಸರು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

40 minutes ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

59 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

1 hour ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

1 hour ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

2 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago