ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್, ಕಾರ್ಕಳ ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ನೆರವೇರಿಸಿದರು.
ಕಾರ್ಕಳ ಪೊಲೀಸ್ ಠಾಣೆ ಪಕ್ಕದಲ್ಲೆ ಪೊಲೀಸರ ಅನುಕೂಲಕ್ಕೆ ಈ ವಸತಿ ಗೃಹ ನಿರ್ಮಾಣವಾಗಿದ್ದು, 2018ರಲ್ಲಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ 92.20 ಕೋ.ರೂ ಮೊತ್ತದಲ್ಲಿ ಸಮುಚ್ಚಯ ನಿರ್ಮಾಣಗೊಂಡಿದೆ. ಎರಡು ಅಂತಸ್ತಿನ 4 ಬ್ಲಾಕ್ಗಳಲ್ಲಿ 48 ಕುಟುಂಬಗಳು ನೆಲೆಸಬಹುದು. ಕಾರ್ಕಳ ನಗರ, ಗ್ರಾಮಾಂತರ, ಅಜೆಕಾರ್ ಠಾಣೆಯ ವ್ಯಾಪ್ತಿಯ ಪೊಲೀಸರಿಗೆ ಇದು ಉಪಯುಕ್ತವಾಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಹಾಗೂ ಇತರರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…