ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದು ಗ್ರಾಮದ ಅಲಿಮಾರು ಗುಡ್ಡೆಯ ನಿವಾಸಿ ಎ.ಸಿ. ಶರ್ಮಿಳಾ ಅವರು ವಂಚನೆಗೊಳಗಾದ ಸಂತ್ರಸ್ತೆ. ಇವರು ಪುತ್ತೂರು ಆರ್ಯಾಪು ನಿವಾಸಿ ವಸಂತ ಬಿ. ಎಂಬುವವರನ್ನು ಕಳೆದ ಅ. 29ರಂದು ವಿವಾಹವಾಗಿದ್ದರು.
ಇದನ್ನೂ ಓದಿ 👇
ಮದುವೆಯ ಮಾತುಕತೆಯ ಸಂದರ್ಭ ಆರೋಪಿ ವಸಂತ ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮುಚ್ಚಿಟ್ಟಿದ್ದನು. ವಿವಾಹವಾದ ಬಳಿಕ ಕೇವಲ ಒಂದು ವಾರ ಪತ್ನಿಯೊಂದಿಗೆ ಇದ್ದು, ನಂತರ ತನ್ನ ಪ್ರೇಮ ವಿಚಾರವನ್ನು ಬಯಲು ಮಾಡಿದ್ದಾನೆ. ಅಲ್ಲದೆ, ಈ ಬಗ್ಗೆ ಪತ್ನಿಗೆ ಪರಿಹಾರ ರೂಪದಲ್ಲಿ 6 ಲಕ್ಷ ರೂ. ನೀಡುವುದಾಗಿ ನಂಬಿಸಿ, ಈಗ ಹಣವನ್ನೂ ನೀಡದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕುಟುಂಬಸ್ಥರ ಮೇಲೂ ದೂರು: ಆರೋಪಿ ವಸಂತನ ಪ್ರೇಮ ವ್ಯವಹಾರದ ಬಗ್ಗೆ ಆತನ ತಾಯಿ ವಿಮಲ, ಅಣ್ಣ ರಘು, ಅಣ್ಣನ ಹೆಂಡತಿ ವಿನೋದ, ಸಹೋದರಿಯರಾದ ಪೂರ್ಣಿಮ, ಅಶ್ವಿನಿ ಮತ್ತು ಭಾವಂದಿರಾದ ಅಶೋಕ ಹಾಗೂ ಸುರೇಶ ಅವರಿಗೆ ಮೊದಲೇ ತಿಳಿದಿತ್ತು. ಆದರೂ ಸತ್ಯವನ್ನು ಮರೆಮಾಚಿ, ವಸಂತನಿಗೆ ಈ ವಂಚನೆಯಲ್ಲಿ ಸಹಕರಿಸಿದ್ದಾರೆ ಎಂದು ಶರ್ಮಿಳಾ ಆರೋಪಿಸಿದ್ದಾರೆ.
ಇದನ್ನೂ ಓದಿ 👇
ಪತ್ನಿ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು BNS ಕಲಂ 318(2), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…