ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದು ಗ್ರಾಮದ ಅಲಿಮಾರು ಗುಡ್ಡೆಯ ನಿವಾಸಿ ಎ.ಸಿ. ಶರ್ಮಿಳಾ ಅವರು ವಂಚನೆಗೊಳಗಾದ ಸಂತ್ರಸ್ತೆ. ಇವರು ಪುತ್ತೂರು ಆರ್ಯಾಪು ನಿವಾಸಿ ವಸಂತ ಬಿ. ಎಂಬುವವರನ್ನು ಕಳೆದ ಅ. 29ರಂದು ವಿವಾಹವಾಗಿದ್ದರು.
ಇದನ್ನೂ ಓದಿ 👇
ಮದುವೆಯ ಮಾತುಕತೆಯ ಸಂದರ್ಭ ಆರೋಪಿ ವಸಂತ ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮುಚ್ಚಿಟ್ಟಿದ್ದನು. ವಿವಾಹವಾದ ಬಳಿಕ ಕೇವಲ ಒಂದು ವಾರ ಪತ್ನಿಯೊಂದಿಗೆ ಇದ್ದು, ನಂತರ ತನ್ನ ಪ್ರೇಮ ವಿಚಾರವನ್ನು ಬಯಲು ಮಾಡಿದ್ದಾನೆ. ಅಲ್ಲದೆ, ಈ ಬಗ್ಗೆ ಪತ್ನಿಗೆ ಪರಿಹಾರ ರೂಪದಲ್ಲಿ 6 ಲಕ್ಷ ರೂ. ನೀಡುವುದಾಗಿ ನಂಬಿಸಿ, ಈಗ ಹಣವನ್ನೂ ನೀಡದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕುಟುಂಬಸ್ಥರ ಮೇಲೂ ದೂರು: ಆರೋಪಿ ವಸಂತನ ಪ್ರೇಮ ವ್ಯವಹಾರದ ಬಗ್ಗೆ ಆತನ ತಾಯಿ ವಿಮಲ, ಅಣ್ಣ ರಘು, ಅಣ್ಣನ ಹೆಂಡತಿ ವಿನೋದ, ಸಹೋದರಿಯರಾದ ಪೂರ್ಣಿಮ, ಅಶ್ವಿನಿ ಮತ್ತು ಭಾವಂದಿರಾದ ಅಶೋಕ ಹಾಗೂ ಸುರೇಶ ಅವರಿಗೆ ಮೊದಲೇ ತಿಳಿದಿತ್ತು. ಆದರೂ ಸತ್ಯವನ್ನು ಮರೆಮಾಚಿ, ವಸಂತನಿಗೆ ಈ ವಂಚನೆಯಲ್ಲಿ ಸಹಕರಿಸಿದ್ದಾರೆ ಎಂದು ಶರ್ಮಿಳಾ ಆರೋಪಿಸಿದ್ದಾರೆ.
ಇದನ್ನೂ ಓದಿ 👇
ಪತ್ನಿ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು BNS ಕಲಂ 318(2), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…