Featured

ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು – vishwanews24

ಕಾರ್ಕಳ : ಪ್ರೀತಿ ವಿಚಾರ ಮುಚ್ಚಿಟ್ಟು ಮದುವೆ : ಪತಿ, ಕುಟುಂಬಸ್ಥರ ವಿರುದ್ಧ ಪತ್ನಿಯಿಂದ ದೂರು ದಾಖಲು

ಕಾರ್ಕಳ: ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮರೆಮಾಚಿ ಮದುವೆಯಾಗಿ, ನಂತರ ಪತ್ನಿಗೆ ವಂಚಿಸಿದ ಪತಿ ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬದವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದು ಗ್ರಾಮದ ಅಲಿಮಾರು ಗುಡ್ಡೆಯ ನಿವಾಸಿ ಎ.ಸಿ. ಶರ್ಮಿಳಾ ಅವರು ವಂಚನೆಗೊಳಗಾದ ಸಂತ್ರಸ್ತೆ. ಇವರು ಪುತ್ತೂರು ಆರ್ಯಾಪು ನಿವಾಸಿ ವಸಂತ ಬಿ. ಎಂಬುವವರನ್ನು ಕಳೆದ ಅ. 29ರಂದು ವಿವಾಹವಾಗಿದ್ದರು.

ಇದನ್ನೂ ಓದಿ 👇

ಮದುವೆಯ ಮಾತುಕತೆಯ ಸಂದರ್ಭ ಆರೋಪಿ ವಸಂತ ತಾನು ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿರುವ ವಿಚಾರವನ್ನು ಮುಚ್ಚಿಟ್ಟಿದ್ದನು. ವಿವಾಹವಾದ ಬಳಿಕ ಕೇವಲ ಒಂದು ವಾರ ಪತ್ನಿಯೊಂದಿಗೆ ಇದ್ದು, ನಂತರ ತನ್ನ ಪ್ರೇಮ ವಿಚಾರವನ್ನು ಬಯಲು ಮಾಡಿದ್ದಾನೆ. ಅಲ್ಲದೆ, ಈ ಬಗ್ಗೆ ಪತ್ನಿಗೆ ಪರಿಹಾರ ರೂಪದಲ್ಲಿ 6 ಲಕ್ಷ ರೂ. ನೀಡುವುದಾಗಿ ನಂಬಿಸಿ, ಈಗ ಹಣವನ್ನೂ ನೀಡದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬಸ್ಥರ ಮೇಲೂ ದೂರು: ಆರೋಪಿ ವಸಂತನ ಪ್ರೇಮ ವ್ಯವಹಾರದ ಬಗ್ಗೆ ಆತನ ತಾಯಿ ವಿಮಲ, ಅಣ್ಣ ರಘು, ಅಣ್ಣನ ಹೆಂಡತಿ ವಿನೋದ, ಸಹೋದರಿಯರಾದ ಪೂರ್ಣಿಮ, ಅಶ್ವಿನಿ ಮತ್ತು ಭಾವಂದಿರಾದ ಅಶೋಕ ಹಾಗೂ ಸುರೇಶ ಅವರಿಗೆ ಮೊದಲೇ ತಿಳಿದಿತ್ತು. ಆದರೂ ಸತ್ಯವನ್ನು ಮರೆಮಾಚಿ, ವಸಂತನಿಗೆ ಈ ವಂಚನೆಯಲ್ಲಿ ಸಹಕರಿಸಿದ್ದಾರೆ ಎಂದು ಶರ್ಮಿಳಾ ಆರೋಪಿಸಿದ್ದಾರೆ.

ಇದನ್ನೂ ಓದಿ 👇

ಪತ್ನಿ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು BNS ಕಲಂ 318(2), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago