Featured

ಕಾರ್ಕಳ: ಫೆ. 11ರಂದು ಅತ್ತೂರು ಪರ್ಪಲೆ ಗಿರಿ ಧರ್ಮ ದೈವಗಳ ಶಿಲಾಮಯ ಗುಡಿಗಳ ಶಿಲಾನ್ಯಾಸ – Vishwanews24

ಕಾರ್ಕಳ: ಫೆ. 11ರಂದು ಅತ್ತೂರು ಪರ್ಪಲೆ ಗಿರಿ ಧರ್ಮ ದೈವಗಳ ಶಿಲಾಮಯ ಗುಡಿಗಳ ಶಿಲಾನ್ಯಾಸ

ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ಕಲ್ಕುಡ , ಕಲ್ಲುರ್ಟಿ, ತೂಕತ್ತೇರಿ ಧರ್ಮದೈವಗಳ ಶಿಲಾಮಯ ಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಫೆ.11 ರವಿವಾರ ಪೂರ್ವಾಹ್ನ 9.58ಕ್ಕೆ ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ನಡೆಯಲಿದೆ ಎಂದು ಅತ್ತೂರು ಪರ್ಪಲೆಗಿರಿ ಪುನರುತ್ಥಾನದ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು ಅವರು ಕಾರ್ಕಳ ಪ್ರಕಾಶ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠದ ಉಡುಪಿಯ ಪೀಠಾಧಿಪತಿಗಳದ ಕಾಳಹಸ್ತೇಂದ್ರ ಮಹಾಸ್ವಾಮೀಜಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು. ತುಳುನಾಡಿನ ಪಾರ್ದನಗಳಲ್ಲಿ ಹಾಗೂ ಅಷ್ಟಮಂಗಲ ಪ್ರಶ್ನಾ ಚಿಂತನೆಗಳ ಮೂಲಕ ಈ ಪುಣ್ಯ ಭೂಮಿಯಲ್ಲಿ ದೇವಾಲಯ ಹಾಗೂ ಗುಡಿ ಗೋಪುರಗಳ ನಿರ್ಮಾಣ ಬಗೆಗಿನ ಮಾಹಿತಿ ಹಾಗೂ ಅವಶ್ಯಕತೆ ತಿಳಿದು ಬಂದಿದೆ.

ಇದರ ಬೆನ್ನಲ್ಲೇ ಟ್ರಸ್ಟ್ ನಿರ್ಮಾಣ ಗೊಂಡಿದ್ದು, ಊರವರ ,ದಾನಿಗಳ ಸಹಕಾರದಿಂದ ಮೊದಲ ಹಂತದಲ್ಲಿ‌ ಶಿಲಾಮಯ ಕಲ್ಕುಡ ಕಲ್ಲುರ್ಟಿ, ತೂಕತ್ತೇರಿ ಧರ್ಮದೈವಗಳ ಗುಡಿಯ ಶಿಲಾನ್ಯಾಸ ನೆರವೇರಲಿದೆ. ಎರಡನೇ ಹಂತದಲ್ಲಿ ಗೌರಿ ಶಂಕರ ದೇವಾಲಯವು ನಿರ್ಮಾಣ ಗೊಳ್ಳಲಿದ್ದು ರೂಪುರೇಷೆ ಗಳು ಸಿದ್ಧವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅತ್ತೂರು ಕೃಷ್ಣ ಗಿರಿ ಕಲ್ಕುಡ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಕೋಶಾಧಿಕಾರಿ ನಿತ್ಯಾನಂದ ಪೈ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

18 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

29 minutes ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

40 minutes ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

44 minutes ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago