Featured

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

ಕಾರ್ಕಳ: ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ, ಮಿಯ್ಯಾರಿನ ಪ್ರತಿಷ್ಠಿತ 17ನೇ ವರ್ಷದ ಲವ-ಕುಶ ಜೋಡುಕರೆ ಕಂಬಳೋತ್ಸವವು ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಫೆ.27ರಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಕಂಬಳಕೂಟ ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟು ಫೆಬ್ರವರಿ ತಿಂಗಳ ಅಂತಿಮ ವಾರಕ್ಕೆ ನಿಗದಿಯಾಗಿದೆ. ರೈತಾಪಿ ಜನರ ಮತ್ತು ಕಂಬಳಾಭಿಮಾನಿಗಳ ಅಭಿಪ್ರಾಯದಂತೆ ಸರಕಾರದ ನಿಯಾಮವಳಿಗಳನ್ನು ಪಾಲಿಸಿ ಎಂದಿನಂತೆ ಕಂಬಳ ಕ್ರೀಡೆಯನ್ನು ಸಂಭ್ರಮದಿಂದ ಆಚರಿಸಲು ಸರ್ವ ರೀತಿಯ ತಯಾರಿ ನಡೆಸಲಾಗಿದ್ದು, ಕಂಬಳ ಆಯೋಜಕರು ಮತ್ತು ಕೋಣಗಳ ಯಜಮಾನರುಗಳು ಪೂರ್ಣ ಸಹಕಾರ ನೀಡುವಂತೆ ಕೋರಲಾಗಿದೆ. ಈ ವರ್ಷದ ಕೂಟದಲ್ಲಿ ನಾನಾ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಪ್ರಾರಂಭದಿಂದ 24 ಗಂಟೆಗಳ ಒಳಗೆ ಕಂಬಳ ಕ್ರೀಡೆಯನ್ನು ಅಂತಿಮ ಹಂತಕ್ಕೆ ತರುವ ಯೋಜನೆ ಹಾಕಿಕೊಳ್ಳಲಾಗಿದೆ.

ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್‌ ಭಟ್‌, ಮಿಯ್ಯಾರು ಚರ್ಚ್ ನ ಧರ್ಮಗುರು ವಂ. ರೆ.ಫಾ ಪಾವುಲ್‌ ರೇಗೋ, ಜಾಮೀಯ ಮಸೀದಿ ಧರ್ಮಗುರು ಇ. ಅಬ್ದುಲ್‌ ರಶೀದ್‌, ಭಾಸ್ಕರ್‌ ಎಸ್‌. ಕೋಟ್ಯಾನ್‌, ಕಾರ್ಯಾಧ್ಯಕ್ಷ ಜೀವನ್‌ದಾಸ್‌ ಅಡ್ಯಂತಾಯ ಭಾಗವಹಿಸಲಿದ್ದಾರೆ.

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಉಸ್ತುವಾರಿ ಸಚಿವ ಬಸವರಾಜ್‌ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್‌, ಸಂಸದೆ ಶೋಭಾ ಕರಂದ್ಲಾಜೆ, ಕೋಟ ಶ್ರೀನಿವಾಸ ಪೂಜಾರಿ, ಡಾ. ಎಂ. ವೀರಪ್ಪ ಮೊೖಲಿ, ಉಮಾನಾಥ ಕೋಟ್ಯಾನ್‌, ಅಭಯಚಂದ್ರ ಜೈನ್‌, ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್‌ ರಾಜೇಂದ್ರ ಕುಮಾರ್‌ ಮೊದಲಾದ ಪ್ರಮುಖರು ಮತ್ತು ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ಕ್ರೀಡಾ ರತ್ನ ಪುರಸ್ಕೃತ ಸುರತ್ಕಲ್‌ ಗೋಪಾಲಕೃಷ್ಣ ಪ್ರಭು, ಒಟಗಾರರಾದ ಮಿಜಾರು ಶ್ರೀನಿವಾಸ ಗೌಡ, ಹಕ್ಕೇರಿ ಸುರೇಶ್‌ ಶೆಟ್ಟಿ ಮತ್ತು ಪಣಪೀಲು ಪ್ರವೀಣ್‌ ಕೋಟ್ಯಾನ್‌ರನ್ನು ಈ ಸಂದರ್ಭ ಸನ್ಮಾನಿಸಲಾಗುವುದು. ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬರ ಮಾರ್ಗದರ್ಶನದಲ್ಲಿಕಂಬಳದ ಯಶಸ್ಸಿನ ಕಾರ್ಯ ನಿರ್ವಹಣೆಗೆ ಬೇರೆ ಬೇರೆ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago