Featured

ಕಾರ್ಕಳ : ಫೇಸ್‌ಬುಕ್​ನಲ್ಲಿ ಪ್ರೀತಿಸಿ ಮದುವೆಯಾಗಿ ವರದಕ್ಷಿಣೆ ಗಾಗಿ ಹೆಂಡತಿಗೆ  ಟಾರ್ಚರ್ – Vishwanews24

ಕಾರ್ಕಳ : ಫೇಸ್‌ಬುಕ್​ನಲ್ಲಿ ಪ್ರೀತಿಸಿ ವಿವಾಹ – ದಾಂಪತ್ಯ ಜೀವನದಲ್ಲಿ ಬಿರುಕು ;ವರದಕ್ಷಿಣೆ ದಾಹಕ್ಕೆ ಬಿದ್ದು ಹೆಂಡತಿಗೆ ಕಿರುಕುಳ

ಕಾರ್ಕಳ : ಫೇಸುಬುಕ್ ಪರಿಚಯವು ಯುವಜೋಡಿಯ ನಡುವೆ ಪ್ರೇಮಾಂಕುರಕ್ಕೆ ಕಾರಣವಾಗಿ ವಿವಾಹ ಬಂಧನಕ್ಕೆ ಕಾಲಿಟ್ಟು ವರ್ಷ ಕಳೆಯುತ್ತಿದ್ದಂತೆ ದಾಂಪತ್ಯ ಜೀವನದಲ್ಲಿ ಕಾಣಿಸಿಕೊಂಡ ವೈಮನಸ್ಸಿನ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಲೇರಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಬೈಲೂರು ಕೌಡೂರಿನ ಸೌಮ್ಯ(33) ಎಂಬವರು ಈ ಕುರಿತು ಕಾರ್ಕಳ ನಗರ ಠಾಣೆಗೆ ದೂರು ಸಲ್ಲಿಸಿದವರು.

ದೂರಿನಲ್ಲಿ ಉಲ್ಲೇಖಿಸಿದಂತೆ ಅವರು ತವರು ಮನೆಯಲ್ಲಿ ನೆಲೆಸಿಕೊಂಡಿದ್ದು, ನಾಲ್ಕೂವರೆ ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ಬೇಕೂರು ನಿವಾಸಿ ಸುನಿಲ್ ಟಿ ಎಂಬುವವರು ಪರಿಚಯವಾಗಿದ್ದರು.

ಪರಿಣಾಮವಾಗಿ ಇಬ್ಬರು ಪರಸ್ಪರ ಪ್ರೀತಿಸಲು ಶುರುಮಾಡಿದರು. 2019 ಮೇ 12ರಂದು ಕಾರ್ಕಳದ ಪೆರ್ವಾಜೆಯ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

2019 ಜೂನ್ 1ರಂದು ವಿವಾಹ ನೊಂದಾಣೆ ಮಾಡಿಸಿಕೊಂಡಿದ್ದರು. 1 ವರ್ಷದವರೆಗೆ ಅವರಿಬ್ಬ ದಾಂಪತ್ಯ ಜೀವನ ಸಾಂಗವಾಗಿ ಮುನ್ನಡೆಯುತ್ತಿತ್ತು. ಬಳಿಕ ಪತಿ ಸುನಿಲ್, ೫ ಲಕ್ಷ ರೂ ವರದಕ್ಷಿಣೆ ಹಣ ಕೊಡಬೇಕೆಂದು ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದನು.

ಸುನೀಲ್‌ನ ವರ್ತನೆಯಿಂದ ಬೇಸತ್ತ ಸೌಮ್ಯ ಬಂಗಾರವನ್ನು ಅಡವಿಟ್ಟು ರೂ. 80,000 ಹಣವನ್ನು ನೀಡಿದ್ದರು. 2019 ಜೂನ್ 30ರಂದು 3 ಲಕ್ಷ ರೂ ಖರ್ಚು ಭರಿಸಿ ಮದುವೆ ಆರತಕ್ಷತೆಯನ್ನು ಕಾರ್ಕಳ ಸ್ವಾಗತ್ ಹೊಟೇಲ್ ಸಭಾ ಭವನದಲ್ಲಿ ನೆರವೇರಿಸಲಾಗಿತ್ತೆಂದು ದೂರಿನಲ್ಲಿ ವಿವರಿಸಲಾಗಿದೆ.

ಮದುವೆಯಾದ ಬಳಿಕ ಸೌಮ್ಯ ಅವರು ತನ್ನ ತಾಯಿ ಮನೆಯಲ್ಲಿಯೇ ಇದ್ದು ಸುನೀಲ್ ತನ್ನ ಮನೆಗೆ ಕರೆದುಕೊಂಡು ಹೋಗಿರುವುದಿಲ್ಲ.2021 ನವಂಬರ್ 17ರಂದು ಸುನಿಲ್ ಊರಿಗೆ ಹೋಗಿದ್ದು, ನಂತರದ ದಿನಗಳಲ್ಲಿ ಫೋನ್ ಮಾಡಿರಲಿಲ್ಲ. ಅದೇ ಕಾರಣದಿಂದ ಸೌಮ್ಯ ಅವರು ಫೋನ್ ಮಾಡಿದಾಗ ಫೋನ್ ಮಾಡಬೇಡವೆಂದು ಸುನೀಲ್ ಬೈಯುತ್ತಿದ್ದನು. ಅದರಿಂದ ಮಾನಸಿಕವಾಗಿ ನೊಂದಿದ್ದ ಸೌಮ್ಯ 2022 ಮಾರ್ಚ್ 07ರಂದು ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿ ಮಾತ್ರೆ ಸೇವಿಸಿ, ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಕುರಿತು ಆರೋಪಿ ಸುನೀಲ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago