ಕಾರ್ಕಳ: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿಟ್ಟೆ ದರ್ಖಾಸು ನಿವಾಸಿ ಸುರೇಶ ಕೊರಗ ಪೂಜಾರಿ(53) ಬಂಧಿತ ಆರೋಪಿ. ಈತ ಜ.16ರಂದು ಸೊಸೈಟಿ ಬೀಗ ಮುರಿದು ಒಳಗೆ ನುಗ್ಗೆ ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಕಳ್ಳತನಕ್ಕೆ ಪ್ರಯತ್ನಿಸಿದ ವ್ಯಕ್ತಿ ಗುರುತು ಪತ್ತೆಯಾಗಿತ್ತು.
ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಜ.17ರಂದು ಆರೋಪಿಯನ್ನು ಬಂಧಿಸಿದರು. ಆರೋಪಿಗೆ ನ್ಯಾಯಾ ಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…