Featured

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿ ದಾರುಣ ಸಾವು – vishwanews24

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ.

ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ.ಕೂಡಲೇ ಆತನನ್ನು ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜನಿತ್‌ ಕೊನೆಯುಸಿರೆಳೆದಿದ್ದಾರೆ. ಮೃತ ಜನಿತ್ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

ಕಾರ್ಕಳ-ಪಡುಬಿದ್ರಿ ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ಸಂಚರಿಸುವ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿರುತ್ತಾರೆ. ವಿದ್ಯಾರ್ಥಿಗಳು ಬಸ್‌ಗಳ ಮೆಟ್ಟಿಲ ಮೇಲೆ ನೇತಾಡಿಕೊಂಡು ಹೋಗಬೇಕಾದ ಅಗತ್ಯವಿದ್ದು ಇದು ದುರಂತಕ್ಕೆ ಕಾರಣವಾಗುತ್ತಿದೆ. ಆದ್ರೂ ಹೆಚ್ಚುವರಿ ಬಸ್‌ ಸೌಲಭ್ಯ ಕೊಡುತ್ತಿಲ್ಲ. ಈ ರೂಟಲ್ಲಿ ಸರ್ಕಾರಿ ಬಸ್‌ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago