ಕಾರ್ಕಳ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿಗಳು ಸಾವಿಗೀಡಾದ ಘಟನೆ ಡಿ.10 ರ ಇಂದು ಬೆಳಗ್ಗೆಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಬಳಿ ಸಂಭವಿಸಿದೆ.
ಭೀಕರ ಅಪಘಾತದ ಪರಿಣಾಮ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಆಂಧ್ರದ ಕುಟುಂಬ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಶೃಂಗೇರಿ ಹೋಗುತ್ತಿದ್ದ ಸಂದರ್ಭ ಬೆಳಗ್ಗೆ 7 ರ ವೇಳೆಗೆ ನೆಲ್ಲಿಕಾರು ಸಮೀಪ ಈ ಘಟನೆ ನಡೆದಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ. ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆಗೆಯಲಾಗಿದೆ. ದಂಪತಿಗಳು ಮೂವತ್ತು ವರ್ಷದೊಳಗಿನವರೆಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…