ಕಾರ್ಕಳ: ಬಸ್ -ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು – Vishwanews24

Featured, ಉಡುಪಿ

ಕಾರ್ಕಳ: ಬಸ್ -ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಇಂದು ರಾತ್ರಿ ನಡೆದಿದೆ. ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಮೃತಪಟ್ಟ ದುರ್ದೈವಿ.

ಕಾರ್ತಿಕ್ ಬೈಲೂರಿನಿಂದ ಜಾ ರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply