Featured

ಕಾರ್ಕಳ:  ಬಹುಮಹಡಿ ಕಟ್ಟಡವೇರಿ ಸಾಹಸ ಪ್ರದರ್ಶಿಸಿದ ಜ್ಯೋತಿರಾಜ್‌ – Vishwanews24

ಕಾರ್ಕಳ:  ಬಹುಮಹಡಿ ಕಟ್ಟಡವೇರಿ ಸಾಹಸ ಪ್ರದರ್ಶಿಸಿದ ಜ್ಯೋತಿರಾಜ್‌

ಕಾರ್ಕಳ:  ಭಾರತದ ಮಂಕಿಮ್ಯಾನ್‌ ಎಂಬ ಖ್ಯಾತಿ ಪಡೆದಿರುವ ಜ್ಯೋತಿರಾಜ್‌ ಕಾರ್ಕಳದ ಸಾಲ್ಮರ ಬಳಿಯಿರುವ ಬಹುಮಹಡಿ ಕಟ್ಟಡವೇರುವ ಸಾಹಸವನ್ನು ಬುಧವಾರ ಬೆಳಗ್ಗೆ ಪ್ರದರ್ಶಿಸಿದ್ದರು.

125 ಅಡಿ ಎತ್ತರದ ಕಟ್ಟಡವನ್ನು ಕೇವಲ 10 ನಿಮಿಷಗಳಲ್ಲಿ ಸರಸರನೇ ಹತ್ತಿಳಿದಾಗ ಅಲ್ಲಿದ್ದವರು ನಿಟ್ಟುಸಿರು ಬಿಟ್ಟರು. ಇದನ್ನು ನೋಡಲು 500ಕ್ಕೂ ಅಧಿಕ ಕುತೂಹಲಿಗಳು ನೆರೆದಿದ್ದರು. ಪೊಲೀಸರು ಭದ್ರತೆ ವ್ಯವಸ್ಥೆ ಮಾಡಿ, ವಾಹನಗಳನ್ನು ಏಕಮುಖ ರಸ್ತೆಯಾಗಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಟ್ಟಡದ ತುತ್ತತುದಿಯಲ್ಲಿ ಕನ್ನಡ ನಾಡಿನ ಬಾವುಟ ಹಾರಿಸುವ ಮೂಲಕ ಕನ್ನಡಾಭಿಮಾನವನ್ನು ಅವರು ಮೆರೆದರು.

ರಾಜ್ಯದೆಲ್ಲೆಡೆ ಸುತ್ತಾಟ ಆರಂಭಿಸಿದ್ದೇನೆ. ಜೋಗ ಜಲಪಾತ ಏರುವಾಗ ಬಿದ್ದು ಗಾಯಗೊಂಡಿದ್ದೆ. ಎರಡು ವರ್ಷಗಳ ಬಳಿಕ ಮತ್ತೆ ಸಾಹಸ ವೃತ್ತಿಗೆ ಮರಳಿದ್ದೇನೆ. ಮೊದಲ ಪ್ರಯತ್ನವಾಗಿ ಬೆಳ್ತಂಗಡಿಯ ಗಡಾಯಿಕಲ್ಲು ಹತ್ತಿಳಿದ ಬಳಿಕ ಕಾರ್ಕಳದ ಸಮೃದ್ಧಿ ಕಟ್ಟಡ ಏರಿದ್ದೇನೆ.

ಅನುಮತಿಗಾಗಿ ಸಚಿವ ವಿ. ಸುನಿಲ್‌ ಕುಮಾರ್‌ ಹಾಗೂ ಉದ್ಯಮಿ ಶ್ರೀನಿವಾಸ್‌ ಕಾಮತ್‌ ಮತ್ತಿತರರು ನೆರವು ನೀಡಿದ್ದಾರೆ. ಬಾಲಾಜಿ ಹೊಟೇಲ್‌ನವರು ಉತ್ತಮ ಆತಿಥ್ಯ ನೀಡಿದರು. ಸಾಹಸ ಪ್ರದರ್ಶಿಸಿ ದೊರಕುವ ಹಣವನ್ನು ಫೌಂಡೇಶನ್‌ ಸ್ಥಾಪಿಸಿ ಬಡ ಮಕ್ಕಳ ನೆರವಿಗೆ ವಿನಿಯೋಗಿಸುವುದಾಗಿ ತಿಳಿಸಿದರು.

ಉದ್ಯಮಿ ನಿತ್ಯಾನಂದ ಪೈ ಜ್ಯೋತಿರಾಜ್‌ ಅವರನ್ನು ಅಭಿನಂದಿಸಿದರು. ಉದ್ಯಮಿ ಬೋಳ ಶ್ರೀನಿವಾಸ್‌ ಕಾಮತ್‌, ಸತೀಶ್‌ ಹೆಗ್ಡೆ ಬೈಲೂರು, ಅವಿನಾಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು ಬೆಂಗಳೂರು: ಡಿವೈಡರ್‌ಗೆ  ಡಿಕ್ಕಿ ಹೊಡೆದ ಪರಿಣಾಮ…

35 seconds ago

ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…

12 minutes ago

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ – vishwanews24

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ ನವದೆಹಲಿ: ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ…

18 minutes ago

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ – vishwanews24

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ)…

23 minutes ago

ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – vishwanews24

ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಉಡುಪಿ:…

28 minutes ago

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

18 hours ago