Featured

ಕಾರ್ಕಳ:  ಬಹುಮಹಡಿ ಕಟ್ಟಡವೇರಿ ಸಾಹಸ ಪ್ರದರ್ಶಿಸಿದ ಜ್ಯೋತಿರಾಜ್‌ – Vishwanews24

ಕಾರ್ಕಳ:  ಬಹುಮಹಡಿ ಕಟ್ಟಡವೇರಿ ಸಾಹಸ ಪ್ರದರ್ಶಿಸಿದ ಜ್ಯೋತಿರಾಜ್‌

ಕಾರ್ಕಳ:  ಭಾರತದ ಮಂಕಿಮ್ಯಾನ್‌ ಎಂಬ ಖ್ಯಾತಿ ಪಡೆದಿರುವ ಜ್ಯೋತಿರಾಜ್‌ ಕಾರ್ಕಳದ ಸಾಲ್ಮರ ಬಳಿಯಿರುವ ಬಹುಮಹಡಿ ಕಟ್ಟಡವೇರುವ ಸಾಹಸವನ್ನು ಬುಧವಾರ ಬೆಳಗ್ಗೆ ಪ್ರದರ್ಶಿಸಿದ್ದರು.

125 ಅಡಿ ಎತ್ತರದ ಕಟ್ಟಡವನ್ನು ಕೇವಲ 10 ನಿಮಿಷಗಳಲ್ಲಿ ಸರಸರನೇ ಹತ್ತಿಳಿದಾಗ ಅಲ್ಲಿದ್ದವರು ನಿಟ್ಟುಸಿರು ಬಿಟ್ಟರು. ಇದನ್ನು ನೋಡಲು 500ಕ್ಕೂ ಅಧಿಕ ಕುತೂಹಲಿಗಳು ನೆರೆದಿದ್ದರು. ಪೊಲೀಸರು ಭದ್ರತೆ ವ್ಯವಸ್ಥೆ ಮಾಡಿ, ವಾಹನಗಳನ್ನು ಏಕಮುಖ ರಸ್ತೆಯಾಗಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಟ್ಟಡದ ತುತ್ತತುದಿಯಲ್ಲಿ ಕನ್ನಡ ನಾಡಿನ ಬಾವುಟ ಹಾರಿಸುವ ಮೂಲಕ ಕನ್ನಡಾಭಿಮಾನವನ್ನು ಅವರು ಮೆರೆದರು.

ರಾಜ್ಯದೆಲ್ಲೆಡೆ ಸುತ್ತಾಟ ಆರಂಭಿಸಿದ್ದೇನೆ. ಜೋಗ ಜಲಪಾತ ಏರುವಾಗ ಬಿದ್ದು ಗಾಯಗೊಂಡಿದ್ದೆ. ಎರಡು ವರ್ಷಗಳ ಬಳಿಕ ಮತ್ತೆ ಸಾಹಸ ವೃತ್ತಿಗೆ ಮರಳಿದ್ದೇನೆ. ಮೊದಲ ಪ್ರಯತ್ನವಾಗಿ ಬೆಳ್ತಂಗಡಿಯ ಗಡಾಯಿಕಲ್ಲು ಹತ್ತಿಳಿದ ಬಳಿಕ ಕಾರ್ಕಳದ ಸಮೃದ್ಧಿ ಕಟ್ಟಡ ಏರಿದ್ದೇನೆ.

ಅನುಮತಿಗಾಗಿ ಸಚಿವ ವಿ. ಸುನಿಲ್‌ ಕುಮಾರ್‌ ಹಾಗೂ ಉದ್ಯಮಿ ಶ್ರೀನಿವಾಸ್‌ ಕಾಮತ್‌ ಮತ್ತಿತರರು ನೆರವು ನೀಡಿದ್ದಾರೆ. ಬಾಲಾಜಿ ಹೊಟೇಲ್‌ನವರು ಉತ್ತಮ ಆತಿಥ್ಯ ನೀಡಿದರು. ಸಾಹಸ ಪ್ರದರ್ಶಿಸಿ ದೊರಕುವ ಹಣವನ್ನು ಫೌಂಡೇಶನ್‌ ಸ್ಥಾಪಿಸಿ ಬಡ ಮಕ್ಕಳ ನೆರವಿಗೆ ವಿನಿಯೋಗಿಸುವುದಾಗಿ ತಿಳಿಸಿದರು.

ಉದ್ಯಮಿ ನಿತ್ಯಾನಂದ ಪೈ ಜ್ಯೋತಿರಾಜ್‌ ಅವರನ್ನು ಅಭಿನಂದಿಸಿದರು. ಉದ್ಯಮಿ ಬೋಳ ಶ್ರೀನಿವಾಸ್‌ ಕಾಮತ್‌, ಸತೀಶ್‌ ಹೆಗ್ಡೆ ಬೈಲೂರು, ಅವಿನಾಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago