ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ.
ಪೊಲೀಸ್ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ.
ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…