Featured

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ : ಸಹೋದರ ಆರೋಪ – vishwanews24

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು : ಸಹೋದರ ಪ್ರಕಾಶ್‌ ಪೂಜಾರಿ

ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್‌ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್‌ ಪೂಜಾರಿ ಪ್ರಶ್ನೆ ಮಾಡಿದ್ದಾರೆ.ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್‌ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ.

ಪೊಲೀಸ್‌ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ.

ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago