ಕಾರ್ಕಳ: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ್ದು, ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ಕಾರ್ಕಳದ ದಿಲೀಪ್ ಹೆಗ್ಡೆ ಸೇರಿಕೊಂಡು ಹತ್ಯೆಗೈರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದ್ದು, ಅವರಿಬ್ಬರ ಬಂಧನವಾಗಿದೆ. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ದೂರು ನೀಡಿದ್ದರು. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
ಉಸಿರುಗಟ್ಟಿ ಸಾವು ಸಂಭವಿಸಿರುವುದು, ಮುಖದಲ್ಲಿ ಗಾಯದ ಗುರುತು ಮೂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್ ತನಿಖೆ ಮತ್ತಷ್ಟು ಚುರುಕುಕೊಂಡಿದೆ. ಮೊಬೈಲ್ ಸಂಭಾಷಣೆ, ಕರೆ ಮಾಡಿದ ವಿವರ, ನೆಟ್ವರ್ಕ್ ಮಾಹಿತಿ, ಸಿಸಿಟಿವಿ ಬಗ್ಗೆ ಪೊಲೀಸರಿಂದ ತಾಂತ್ರಿಕ ತನಿಖೆ ವೇಗ ಪಡೆದುಕೊಂಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…