ಕಾರ್ಕಳ: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಕಾರ್ಕಳ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸಂಚಾರಿ ಪೀಠ ವು ಮಾ.10ಕ್ಕೆ ಮುಂದೂಡಿದ್ದರೆ.
ಎರಡನೇ ಆರೋಪಿ ದಿಲೀಪ್ ಹೆಗ್ಡೆ ಪರ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.ಮಂಗಳವಾರ ಪ್ರತಿಮಾ ಅವರ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣಾ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಆರೋಪಿಗಳಿಬ್ಬರನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.
ಏನಿದು ಪ್ರಕರಣ ?
2024ರ ಅ.20ರಂದು ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ(42) ಎಂಬವರನ್ನು ಆತನ ಪತ್ನಿ ಪ್ರತಿಮ ತನ್ನ ಪ್ರಿಯಕರ ದಿಲೀಪ್ ಹೆಗ್ಡೆಯ ಜತೆ ಸೇರಿಕೊಂಡು ಹತ್ಯೆಗೈದಿದ್ದಳು. ಪೊಲೀಸ್ ತನಿಖೆಯಿಂದ ಪ್ರಕರಣ ಬಯಲಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿತ್ತು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…