Featured

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ – vishwanews24

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, ಅದರ ವಿಚಾರಣೆ ಮಾ. 11ರಂದು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದಲ್ಲಿ ನಡೆಯಲಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ಸಲ್ಲಿಸಿದ್ದರು. ಅದರ ಕುರಿತಂತೆ ವಿಚಾರಣೆ ನಡೆದ ಬಳಿಕ ಜಾಮೀನು ನೀಡಬೇಕೋ ? ಅಥವಾ ಬೇಡವೋ ಅನ್ನುವುದನ್ನು ನ್ಯಾಯಾಧೀಶರು ನಿರ್ಧರಿಸಲಿದ್ದಾರೆ.

ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್‌ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಘಟನೆ ಹಿನ್ನೆಲೆ: ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

2 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

2 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

2 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

2 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

2 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

2 days ago