ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ, ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಕಾರ್ಕಳ ಸಂಚಾರಿ ಪೀಠದ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು, ಜಾಮೀನು ನೀಡಲು ನಿರಾಕರಿಸಿದ್ದಾರೆ.
ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿಸ್ಕರಿಸಿತ್ತು.
ಘಟನೆ ಹಿನ್ನೆಲೆ : ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20 ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25 ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…