ಕಾರ್ಕಳ: ಕೆಲ ದಿನಗಳ ಹಿಂದೆ ನಡೆದ ಕಾರ್ಕಳ ತಾಲೂಕಿನ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಅರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೋಮವಾರ (ಅ.28) ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್ ಹೆಗ್ಡೆಗೆ ನ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಆರಂಭದಲ್ಲಿ ದಿಲೀಪ್ ಹೆಗ್ಡೆಯನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಪ್ರತಿಮಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್ಜೈಲಿನಲ್ಲಿದ್ದಾಳೆ.
ಅಜೆಕಾರಿನ ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ವ್ಯವಸ್ಥಿತ ಸಂಚು ರೂಪಿಸಿ ಹತ್ಯೆ ಮಾಡಿದ್ದರು. ಪತಿಯ ಆಹಾರಕ್ಕೆ ನಿಯಮಿತವಾಗಿ ವಿಷ ಪದಾರ್ಥವೊಂದನ್ನು ಸೇರಿಸಿ ಪತ್ನಿ ಪ್ರತಿಮಾ ನೀಡುತ್ತಿದ್ದಳು. ಬಳಿಕ ಕಳೆದ ಅ.20ರಂದು ಇಬ್ಬರು ಸೇರಿ ಮಲಗಿದ್ದ ಬಾಲಕೃಷ್ಣ ಅವರ ಮುಖಕ್ಕೆ ಒತ್ತಿ ಹಿಡಿದು ಹತ್ಯೆ ಮಾಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…