ಕಾರ್ಕಳ : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರಿಗೆ ಮಾಹಿತಿ ನೀಡಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಚಿರತೆಯು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯ ದೇಹವು ಕೊಳೆತ ಸ್ಥಿತಿಯಲ್ಲಿದ್ದುದನ್ನು ಗಮನಿಸಿದ ಅಧಿಕಾರಿಗಳು, ಇದು ಎರಡು-ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.
ಈ ಪರಿಸರದ ಸುತ್ತಮುತ್ತ ಹಲವಾರು ಮನೆಗಳಿದ್ದು, ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಗ್ರಾಮಸ್ಥರ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಲವು ಬಾರಿ ಬೋನು ಇರಿಸಿದ್ದರೂ, ಯಾವುದೇ ಚಿರತೆ ಸೆರೆಸಿಕ್ಕಿರಲಿಲ್ಲ.
ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…