Featured

ಕಾರ್ಕಳ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವು – vishwanews24

ಕಾರ್ಕಳ: ಬಾವಿಗೆ ಬಿದ್ದು ಮೂರು ವರ್ಷದ ಗಂಡು ಚಿರತೆ ಸಾವು

ಕಾರ್ಕಳ : ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರಿಗೆ ಮಾಹಿತಿ ನೀಡಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಚಿರತೆಯು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯ ದೇಹವು ಕೊಳೆತ ಸ್ಥಿತಿಯಲ್ಲಿದ್ದುದನ್ನು ಗಮನಿಸಿದ ಅಧಿಕಾರಿಗಳು, ಇದು ಎರಡು-ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.

ಈ ಪರಿಸರದ ಸುತ್ತಮುತ್ತ ಹಲವಾರು ಮನೆಗಳಿದ್ದು, ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಗ್ರಾಮಸ್ಥರ ಆತಂಕದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಲವು ಬಾರಿ ಬೋನು ಇರಿಸಿದ್ದರೂ, ಯಾವುದೇ ಚಿರತೆ ಸೆರೆಸಿಕ್ಕಿರಲಿಲ್ಲ.

ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago