Featured

ಕಾರ್ಕಳ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ; ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ : ಸುನೀಲ್ ಕುಮಾರ್ -Vishwanews24

ಕಾರ್ಕಳ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ;

ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ : ಸುನೀಲ್ ಕುಮಾರ್

ಕಾರ್ಕಳ, : ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಐತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. 2020ರಲ್ಲಿ ರೂ. 81 ಕೋಟಿ ವೆಚ್ಚದಲ್ಲಿ 87 ಕಿಂಡಿ ಅಣೆಕಟ್ಟು ನಿರ್ಮಾಣ, ರಾಮ ಸಮುದ್ರ ಸ್ವಚ್ಚತೆ ನಿರ್ಧಾರ, ತಾಲೂಕಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ನಿರ್ಮಾಣ, ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಅಭಿವೃದ್ಧಿ, ತಾಲೂಕು ಒಳಾಂಗಣ ಕ್ರೀಡಾಂಗಣ ಸೇರಿದಂತೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಒಳಗೊಂಡಂತೆ ಶೇ.90 ರಷ್ಟು ಜನರ ನಿರೀಕ್ಷೆಯಂತೆ ಕೆಲಸ ಕಾರ್ಯಗಳನ್ನು ಮಾಡಿರುವುದಾಗಿ ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಮಂಜುನಾಥ ಪೈ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆನೆಗುದ್ದಿಗೆ ಬಿದ್ದಿರುವ ಡೀಮ್ಡ್ ಫಾರೆಸ್ಟ್ ಸಮಸ್ಸೆ ಹಾಗೂ ಕುಮ್ಕಿ ಹಕ್ಕು ನೀಡುವ ವಿಚಾರದಲ್ಲಿ ಸರಕಾರ ಜನರಪರವಾಗಿಯೇ ಕಾರ್ಯನಿರ್ವಹಿಸಲಿದೆ. ಮುಂದಿನ ಕೆಲ ತಿಂಗಳ ಅವಧಿಯೊಳಗಾಗಿ ಸರಕಾರದ ಹೊಸ ಆದೇಶ ಹೊರಬೀಳಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

“ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 492 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಬ್ರಿ ತಾಲೂಕಿನಲ್ಲಿ 93 ಹಾಗೂ ಕಾರ್ಕಳ ತಾಲೂಕಿನಲ್ಲಿ 399 ಸ್ಥಾನಗಳಿವೆ. ಅದರಲ್ಲಿ ಬಿಜೆಪಿ ಬೆಂಬಲಿತ 36 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 34 ಗ್ರಾಮ ಪಂಚಾಯತ್‌ಗಳೆಲ್ಲವೂ ಬಿಜೆಪಿ ಗೆಲ್ಲಲ್ಲೇ ಬೇಕು. ನಲ್ಲೂರು ಗ್ರಾಮ ಪಂಚಾಯತ್ ವ್ಯಾಫ್ತಿಯ 15 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಬಿಜೆಪಿ ಬೆಂಬಲಿಗರು ಅವಿರೋಧ ಆಯ್ಕೆಯಾಗಿರುವ ಮೂಲಕ ಕಾರ್ಕಳ ತಾಲೂಕಿನಲ್ಲಿ ಮೊಟ್ಟ ಮೊದಲ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿಗರು ತಮ್ಮ ಬಗಲಿಗೆ ಹಾಕಿ ಕೊಂಡಿರುವುದು ಮೊದಲ ವಿಜಯ” ಎಂದು ಹೇಳಿದ್ದಾರೆ.

ಹಿರಿಯ ನೇತಾರ ಬೋಳ ಪ್ರಭಾಕರ ಕಾಮತ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಕೀಲರಾದ ಎಂ.ಕೆ.ವಿಜಯಕುಮಾರ್, ಮಣಿರಾಜ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ ಸಭೆಯನ್ನು ಉದ್ದೇಶಿ ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದು, ರೇಶ್ಮಾ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಜಯರಾಮ ಸಲ್ಯಾನ್,ಕುತ್ಯಾರು ನವೀನ್ ಶೆಟ್ಟಿ, ರವಿ ಅಮೀನ್ ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago