ಕಾರ್ಕಳ: ಹೊಸದಾಗಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕರ್ನಾಟಕ ಜರ್ಮನ್ ಟೆಕ್ನಾಲಜಿ ತರಬೇತಿ ಸಂಸ್ಥೆ (ಕೆಜಿಟಿಟಿಐ)ಗಳ ಮಂಜೂರಾತಿಯಿಂದಾಗಿ ತಾಂತ್ರಿಕ ಶಿಕ್ಷಣದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಇದೀಗ ಈ ನರ್ಸಿಂಗ್ ಕಾಲೇಜಿನ ಮಂಜೂರಾತಿಯಿಂದಾಗಿ ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೂ ಕೂಡ ಪ್ರಯೋಜನವಾಗಲಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳು ಮಲೆನಾಡಿನ ತಪ್ಪಲಿನ ಪ್ರದೇಶಗಳನ್ನು ಹೊಂದಿದ್ದು ಹೆಚ್ಚಿನ ಪ್ರದೇಶಗಳು ತಾಲೂಕು ಕೇಂದ್ರದಿಂದ 20 ಕಿ.ಮೀ ವ್ಯಾಪ್ತಿಯನ್ನು ಹೊಂದಿರುತ್ತದೆ. ಕಾರ್ಕಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನರ್ಸಿಂಗ್, ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸುಗಳನ್ನು ವ್ಯಾಸಂಗ ಮಾಡಬೇಕಾದರೆ ಜಿಲ್ಲಾ ಕೇಂದ್ರಗಳಿಗೆ ಹೋಗಬೇಕಾಗಿತ್ತು. ಬಿ.ಎಸ್ಸಿ ನರ್ಸಿಂಗ್ ಮಾಡಬೇಕಾದರೆ ಮಂಗಳೂರು ವೆನ್ಲಾಕ್ ಇಲ್ಲವೇ ಅಧಿಕ ಪ್ರವೇಶ ಶುಲ್ಕ ಪಾವತಿಸಿ ಖಾಸಗಿ ನರ್ಸಿಂಗ್ ಕಾಲೇಜುಗಳನ್ನು ಆಶ್ರಯಿಸಬೇಕಾಗಿತ್ತು.
ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಕಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿ.ಎಸ್ಸಿ ನರ್ಸಿಂಗ್ ಕಾಲೇಜು ಆರಂಭಿಸುವರೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದೀಗ ಮಾನ್ಯ ಸಚಿವರ ವಿಶೇಷ ಮುತುವರ್ಜಿಯಿಂದ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸನ್ನು 2021-22ನೇ ಸಾಲಿನಲ್ಲಿ ಹೊಸದಾಗಿ ಆರಂಭಿಸಲು ಸರ್ಕಾರದಿಂದ ಆದೇಶ ಮಾಡಲಾಗಿದೆ. ಸದ್ರಿ ಬಿ.ಎಸ್ಸಿ ನರ್ಸಿಂಗ್ ಕಾಲೇಜು 40 ಸೀಟು ಪ್ರವೇಶ ಮಿತಿಯೊಂದಿಗೆ ಆರಂಭಗೊಳ್ಳಲಿದ್ದು ಈ ವರ್ಷವೇ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ. ಇದಕ್ಕೆ ಸಂಬಂಧಿಸಿದ ನೀತಿ ನಿಯಮಗಳನ್ನು ತಕ್ಷಣವೇ ಪೂರೈಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈಗಾಗಲೇ ಕಾರ್ಕಳಕ್ಕೆ ಹೊಸದಾಗಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕರ್ನಾಟಕ ಜರ್ಮನ್ ಟೆಕ್ನಾಲಜಿ ತರಬೇತಿ ಸಂಸ್ಥೆ (ಕೆಜಿಟಿಟಿಐ)ಗಳ ಮಂಜೂರಾತಿಯಿಂದಾಗಿ ತಾಂತ್ರಿಕ ಶಿಕ್ಷಣದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು ಇದೀಗ ಈ ನರ್ಸಿಂಗ್ ಕಾಲೇಜಿನ ಮಂಜೂರಾತಿಯಿಂದಾಗಿ ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೂ ಕೂಡ ಪ್ರಯೋಜನವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…