Featured

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ (ನಂದಳಿಕೆ) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ರವಿವಾರ ಸಂಜೆ ಕಾರ್ಕಳದಿಂದ ಸುಮಾರು 7.30ರ ವೇಳೆಗೆ ಸ್ಕೂಟಿಯಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ, ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ನೀಡಿ ಯೂ-ಟರ್ನ್ ಪಡೆಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಬೈಕ್‌ ಸ್ಕೂಟಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಿವಪ್ರಸಾದ್ ರಾವ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗಾಯಗಳ ತೀವ್ರತೆಯ ಕಾರಣ ಚಿಕಿತ್ಸೆಯು ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಂದಾಯ ಇಲಾಖೆಯ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದ ಶಿವಪ್ರಸಾದ್ ರಾವ್ ಅವರ ನಿಧನಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

4 minutes ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

12 minutes ago

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ : ಅಶೋಕ್ ರೈ – vishwanews24

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…

27 minutes ago

ಉಡುಪಿ : ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ – vishwanews24

ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ…

39 minutes ago

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

14 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago