ಕಾರ್ಕಳ: ಯಮರೂಪದಲ್ಲಿ ರಸ್ತೆಗೆ ಅಡ್ಡ ಬಂದ ಶ್ವಾನದ ಅವಾಂತರಕ್ಕೆ ಬೈಕ್ ಪಲ್ಟಿ ಹೊಡೆದಿದ್ದು, ನವವಿವಾಹಿತೆಯೊಬ್ಬಳು ರಸ್ತೆಗೆ ಎಸೆಯಲಟ್ಟು ಜೀವತೆತ್ತ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಸಂಭವಿಸಿದೆ.
ಕಾರ್ಕಳ ತೆಳ್ಳಾರು ರಸ್ತೆಯ ನಿವಾಸಿ ನಿಕ್ಷಾ ಎಂಬಾತ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ನತದೃಷ್ಠೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿಶಾಲ್ ಎಂಬವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟದ್ದರು.
ಶುಕ್ರವಾರ ಮಧ್ಯಾಹ್ನದ ವೇಳೆಗೆ ಇವರು ಮಂಗಳೂರಿಗೆ ಹೊರಟಿದ್ದು,ಹೊಸ್ಮಾರು ಸೇತುವೆ ಸಮೀಪ ಸ್ಮಶಾನ ಬಳಿ ರಸ್ತೆಗೆ ಅಡ್ಡವಾಗಿ ಶ್ವಾನ ಹಾದು ಹೋಗಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಒಂದು ಬದಿಗೆ ಮಗುಚಿ ಬಿತ್ತು. ಆ ವೇಳೆಗೆ ಬೈಕ್ನ ಸಹಸವಾರಿ ನಿಕ್ಷಾ ರಸ್ತೆಗೆ ಎಸೆಯಲ್ಪಟ್ಟು ತಲೆ ಭಾಗಕ್ಕೆ ತೀವ್ರ ತರದಲ್ಲಿ ಗಾಯಗೊಂಡಿದ್ದರು. ಡಾಂಬರೀನ ಏಟಿಗೆ ಸ್ಥಳದಲ್ಲಿಯೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…