Featured

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ: ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಪ್ರಶ್ನಿಸಿದ್ದಾರೆ.

ದಿನೇದಿನೇ ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವ ಸಂದರ್ಭದಲ್ಲಿ ದಿನದೂಡುವುದೇ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಇರುವಾಗ ಅತ್ತ ಮಾಡಲು ಕೆಲಸವೂ ಇಲ್ಲದೆ ಕಂಗಾಲಾಗಿರುವ ಬಡ ಮತ್ತು ಮಧ್ಯಮವರ್ಗದವರ ಮೇಲೆ ಗ್ಯಾಸ್ ದರವನ್ನು ಕೇವಲ 10 ದಿನಗಳ ಎರಡು ಬಾರಿ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಉಪ್ಪು ಸವರಿದಂತೆ ಬಿಜೆಪಿ ಸರಕಾರವು ಮಾಡುತ್ತಿದೆ.

ಬಡವರ ಮಧ್ಯಮ ವರ್ಗದವರ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದು, ಸರಕಾರದ ಕೊರೋನಾ ನಿರ್ವಹಣೆಯ ವೈಫಲ್ಯದಿಂದ ಈಗಾಗಲೇ ಜನರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ. ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆ ಮಾಡುತ್ತಾ ಜನ ಸೇರಿಸುತ್ತಾ ಜನರ ದಿಕ್ಕು ತಪ್ಪಿಸುತ್ತ ಸಂಘ ಪರಿವಾರದ ಕಟ್ಟುಕತೆಗಳನ್ನು ಭಾಷಣಗಳಲ್ಲಿ ಹೇಳಿ ಅದನ್ನು ಸತ್ಯ ಮಾಡವ ಮತ್ತು ಜನರ ದಿಕ್ಕನ್ನು ತಪ್ಪಿಸವ ಕೆಲಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲಾಕ್ ಡೌನ್ ಮತ್ತು ವೀಕೆಂಡ್ ಕರ್ಫ್ಯೂ ನಿಂದ ಕೆಲಸ ಕಳೆದುಕೊಂಡವರು ದಿಕ್ಕೇ ತೋಚದಂತಾಗಿದ್ದಾರೆ ಅತ್ತ ಕೆಲಸವೂ ಇಲ್ಲ ಇತ್ತ ದಿನ ದೂಡಲು ಕೂಡ ಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ ಆದರೆ ಬಿಜೆಪಿ ಸರಕಾರ ಇದ್ಯಾವುದರ ಗೊಡವೆಯೇ ಇಲ್ಲದೆ ದಿನೇದಿನೇ ಅಗತ್ಯವಸ್ತುಗಳ ಮತ್ತು ಜನಬಳಕೆಯ ಸಮಾಗ್ರಿಗಳ ಬೆಲೆಯನ್ನು ಏರಿಸುದರಲ್ಲಿ ನಿರತರಾಗಿದ್ದಾರೆ ಇದೊಂದು ಕರುಣೆಯೇಯಿಲ್ಲದ ಸರಕಾರ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರಲ್ಲ ಎಂಬುದನ್ನು ಜನರು ಮನಗಾಣಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

18 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

20 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago