ಕಾರ್ಕಳ: ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಪ್ರಶ್ನಿಸಿದ್ದಾರೆ.
ದಿನೇದಿನೇ ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವ ಸಂದರ್ಭದಲ್ಲಿ ದಿನದೂಡುವುದೇ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಇರುವಾಗ ಅತ್ತ ಮಾಡಲು ಕೆಲಸವೂ ಇಲ್ಲದೆ ಕಂಗಾಲಾಗಿರುವ ಬಡ ಮತ್ತು ಮಧ್ಯಮವರ್ಗದವರ ಮೇಲೆ ಗ್ಯಾಸ್ ದರವನ್ನು ಕೇವಲ 10 ದಿನಗಳ ಎರಡು ಬಾರಿ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಉಪ್ಪು ಸವರಿದಂತೆ ಬಿಜೆಪಿ ಸರಕಾರವು ಮಾಡುತ್ತಿದೆ.
ಬಡವರ ಮಧ್ಯಮ ವರ್ಗದವರ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದು, ಸರಕಾರದ ಕೊರೋನಾ ನಿರ್ವಹಣೆಯ ವೈಫಲ್ಯದಿಂದ ಈಗಾಗಲೇ ಜನರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ. ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆ ಮಾಡುತ್ತಾ ಜನ ಸೇರಿಸುತ್ತಾ ಜನರ ದಿಕ್ಕು ತಪ್ಪಿಸುತ್ತ ಸಂಘ ಪರಿವಾರದ ಕಟ್ಟುಕತೆಗಳನ್ನು ಭಾಷಣಗಳಲ್ಲಿ ಹೇಳಿ ಅದನ್ನು ಸತ್ಯ ಮಾಡವ ಮತ್ತು ಜನರ ದಿಕ್ಕನ್ನು ತಪ್ಪಿಸವ ಕೆಲಸದಲ್ಲಿ ನಿರತರಾಗಿದ್ದಾರೆ.
ಈಗಾಗಲೇ ಲಾಕ್ ಡೌನ್ ಮತ್ತು ವೀಕೆಂಡ್ ಕರ್ಫ್ಯೂ ನಿಂದ ಕೆಲಸ ಕಳೆದುಕೊಂಡವರು ದಿಕ್ಕೇ ತೋಚದಂತಾಗಿದ್ದಾರೆ ಅತ್ತ ಕೆಲಸವೂ ಇಲ್ಲ ಇತ್ತ ದಿನ ದೂಡಲು ಕೂಡ ಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ ಆದರೆ ಬಿಜೆಪಿ ಸರಕಾರ ಇದ್ಯಾವುದರ ಗೊಡವೆಯೇ ಇಲ್ಲದೆ ದಿನೇದಿನೇ ಅಗತ್ಯವಸ್ತುಗಳ ಮತ್ತು ಜನಬಳಕೆಯ ಸಮಾಗ್ರಿಗಳ ಬೆಲೆಯನ್ನು ಏರಿಸುದರಲ್ಲಿ ನಿರತರಾಗಿದ್ದಾರೆ ಇದೊಂದು ಕರುಣೆಯೇಯಿಲ್ಲದ ಸರಕಾರ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರಲ್ಲ ಎಂಬುದನ್ನು ಜನರು ಮನಗಾಣಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…