Featured

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ : ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? : ಅನಿತಾ ಡಿʼಸೋಜಾ ಬೆಳ್ಮಣ್ -Vishwanews24

ಕಾರ್ಕಳ: ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಪ್ರಶ್ನಿಸಿದ್ದಾರೆ.

ದಿನೇದಿನೇ ಅಗತ್ಯವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವ ಸಂದರ್ಭದಲ್ಲಿ ದಿನದೂಡುವುದೇ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಇರುವಾಗ ಅತ್ತ ಮಾಡಲು ಕೆಲಸವೂ ಇಲ್ಲದೆ ಕಂಗಾಲಾಗಿರುವ ಬಡ ಮತ್ತು ಮಧ್ಯಮವರ್ಗದವರ ಮೇಲೆ ಗ್ಯಾಸ್ ದರವನ್ನು ಕೇವಲ 10 ದಿನಗಳ ಎರಡು ಬಾರಿ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಉಪ್ಪು ಸವರಿದಂತೆ ಬಿಜೆಪಿ ಸರಕಾರವು ಮಾಡುತ್ತಿದೆ.

ಬಡವರ ಮಧ್ಯಮ ವರ್ಗದವರ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದು, ಸರಕಾರದ ಕೊರೋನಾ ನಿರ್ವಹಣೆಯ ವೈಫಲ್ಯದಿಂದ ಈಗಾಗಲೇ ಜನರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ. ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆ ಮಾಡುತ್ತಾ ಜನ ಸೇರಿಸುತ್ತಾ ಜನರ ದಿಕ್ಕು ತಪ್ಪಿಸುತ್ತ ಸಂಘ ಪರಿವಾರದ ಕಟ್ಟುಕತೆಗಳನ್ನು ಭಾಷಣಗಳಲ್ಲಿ ಹೇಳಿ ಅದನ್ನು ಸತ್ಯ ಮಾಡವ ಮತ್ತು ಜನರ ದಿಕ್ಕನ್ನು ತಪ್ಪಿಸವ ಕೆಲಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲಾಕ್ ಡೌನ್ ಮತ್ತು ವೀಕೆಂಡ್ ಕರ್ಫ್ಯೂ ನಿಂದ ಕೆಲಸ ಕಳೆದುಕೊಂಡವರು ದಿಕ್ಕೇ ತೋಚದಂತಾಗಿದ್ದಾರೆ ಅತ್ತ ಕೆಲಸವೂ ಇಲ್ಲ ಇತ್ತ ದಿನ ದೂಡಲು ಕೂಡ ಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ ಆದರೆ ಬಿಜೆಪಿ ಸರಕಾರ ಇದ್ಯಾವುದರ ಗೊಡವೆಯೇ ಇಲ್ಲದೆ ದಿನೇದಿನೇ ಅಗತ್ಯವಸ್ತುಗಳ ಮತ್ತು ಜನಬಳಕೆಯ ಸಮಾಗ್ರಿಗಳ ಬೆಲೆಯನ್ನು ಏರಿಸುದರಲ್ಲಿ ನಿರತರಾಗಿದ್ದಾರೆ ಇದೊಂದು ಕರುಣೆಯೇಯಿಲ್ಲದ ಸರಕಾರ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆದವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರಲ್ಲ ಎಂಬುದನ್ನು ಜನರು ಮನಗಾಣಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

37 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago